ಬ್ರೇಕಿಂಗ್ ನ್ಯೂಸ್
17-10-20 07:29 am Headline Karnataka News Network ದೇಶ - ವಿದೇಶ
ಜಮ್ಮು-ಕಾಶ್ಮೀರ, ಅಕ್ಟೋಬರ್ .17 : ಜಮ್ಮು ಕಾಶ್ಮೀರದಲ್ಲಿ ಜನರು ಉಗ್ರರ ಸಖ್ಯ ಬಿಟ್ಟು ಮುಖ್ಯವಾಹಿನಿಗೆ ಬರಬೇಕು. ಅದಕ್ಕಾಗಿ ಸರಕಾರದ ಜೊತೆ ಕೈಜೋಡಿಸಬೇಕೆಂದು ಅಲ್ಲಿ ಅಭಿಯಾನಗಳು ನಡೆಯುತ್ತಿವೆ. ಇಂಥ ಸಂದರ್ಭದಲ್ಲಿಯೇ ಸೇನಾ ಕಾರ್ಯಾಚರಣೆಯಲ್ಲಿ ಮೃತಪಟ್ಟಿದ್ದ ಭಯೋತ್ಪಾದಕನ ಮಗನೊಬ್ಬ ಮುಖ್ಯ ವಾಹಿನಿಗೆ ಬಂದು ಕೆಎಎಸ್ ಅಧಿಕಾರಿಯಾಗುವ ಮೂಲಕ ದೇಶದ ಗಮನ ಸೆಳೆದಿದ್ದಾನೆ.
ಜಮ್ಮ-ಕಾಶ್ಮೀರದ ದೋಡಾ ಜಿಲ್ಲೆಯ ಗುಂಡ್ನಾ ಗ್ರಾಮ ಎಂದರೆ ಹಿಂದೆ ಭಯೋತ್ಪಾದಕರೇ ತುಂಬಿಕೊಂಡಿದ್ದ ಪ್ರದೇಶವಾಗಿತ್ತು. ಇದೇ ಏರಿಯಾದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿಯಲ್ಲಿ ಹಲವು ಉಗ್ರರು ಸಾವಿಗೀಡಾಗಿದ್ದರು. ಈ ಪೈಕಿ ಒಬ್ಬ ಉಗ್ರನ ಪುತ್ರ ಅಬ್ದುಲ್ಲಾ ಎಂಬಾತನನ್ನು ಶ್ರೀನಗರದ ಅನಾಥಾಶ್ರಮದಲ್ಲಿ ಬೆಳಸಲಾಗಿತ್ತು. ಸಾಕಷ್ಟು ಸವಾಲುಗಳನ್ನು ಮೆಟ್ಟಿ ನಿಂತು ಸೇನಾಧಿಕಾರಿಗಳ ಪ್ರೋತ್ಸಾಹ ಪಡೆದ ಯುವಕ ಈಗ ಸರಕಾರದ ಕೆಎಎಸ್ ಎಕ್ಸಾಂ ಬರೆದು ಅಧಿಕಾರಿಯಾಗಿದ್ದಾನೆ.
ಆಲಿಗಢ ಮುಸ್ಲಿಂ ವಿವಿಯಲ್ಲಿ ಪದವಿ ಪಡೆದಿದ್ದ ಅಬ್ದುಲ್ಲಾ ಕೆಎಎಸ್ ಪಾಸ್ ಮಾಡಿದ್ದು ಜಮ್ಮು ಕಾಶ್ಮೀರದಲ್ಲಿ ಇತರೇ ಮಂದಿಗೆ ದೊಡ್ಡ ಪ್ರೇರಣೆಯಾಗಲಿದೆ ಎನ್ನಲಾಗುತ್ತಿದೆ. ಈತನ ಸಾಧನೆಯಿಂದ ಉತ್ತೇಜಿತರಾದ ಭಾರತೀಯ ಸೇನೆ ಕಾರ್ಯಕ್ರಮ ಹಮ್ಮಿಕೊಂಡು ಅಬ್ದುಲ್ಲಾ ಅವರನ್ನು ವಿಶೇಷವಾಗಿ ಸನ್ಮಾನಿಸಿ, ಕಾಶ್ಮೀರದ ಯುವಜನರು ಸರಕಾರಿ ಅಧಿಕಾರಿಯಾಗಲು ಮುಂದೆ ಬರುವಂತೆ ಕರೆ ನೀಡಿದೆ.
ಇದೆ ವೇಳೆ ಮಾತನಾಡಿದ ಅಬ್ದುಲ್ಲಾ, ಬಾಲ್ಯದಿಂದಲೂ ತುಂಬ ಸವಾಲುಗಳನ್ನು ಮೆಟ್ಟಿಕೊಂಡು ಮುಂದೆ ಬಂದಿದ್ದೇನೆ. ಕಷ್ಟಗಳು ಎದುರಾದರೂ, ಅಧಿಕಾರಿ ಆಗಬೇಕೆಂಬ ಗುರಿಯನ್ನು ಬಿಟ್ಟು ಕೊಡಲಿಲ್ಲ. ಉಗ್ರವಾದದಿಂದ ಮುಕ್ತವಾದ ಪ್ರದೇಶಗಳಲ್ಲಿ ಯುವ ಜನಾಂಗಕ್ಕೆ ಸಾಕಷ್ಟು ಅವಕಾಶಗಳಿದ್ದು ಬಳಸಿಕೊಳ್ಳಬಹುದು ಎಂದು ಹೇಳಿದ್ದಾರೆ.
ಕಠಿಣ ಪರಿಶ್ರಮ ಹೇಗೆ ವ್ಯಕ್ತಿಯ ಜೀವನವನ್ನು ಬದಲಿಸಬಹುದು ಎಂಬುದಕ್ಕೆ ಘಾಜಿ ಅಬ್ದುಲ್ಲಾ ಉತ್ತಮ ಉದಾಹರಣೆ ಎಂದು ಸೇನಾ ವಕ್ತಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm