ಬ್ರೇಕಿಂಗ್ ನ್ಯೂಸ್
08-01-23 06:00 pm HK News Desk ದೇಶ - ವಿದೇಶ
ಕಾಸರಗೋಡು, ಜ.8 : ಬಿರಿಯಾನಿ ತಿಂದು 19 ವರ್ಷದ ಯುವತಿ ಸಾವನ್ನಪ್ಪಿದ ಪ್ರಕರಣ ಕೇರಳದಲ್ಲಿ ಸಂಚಲನ ಸೃಷ್ಟಿಸಿದೆ. ಕುಜಿಮಂತಿ ಎನ್ನುವ ಕೇರಳದ ವಿಶೇಷ ಮಾದರಿಯ ಬಿರಿಯಾನಿ ತಿಂದ ಬಳಿಕ ಅಂಜುಶ್ರೀ ಸೇರಿದಂತೆ ಕುಟುಂಬದ ನಾಲ್ವರು ಅಸ್ವಸ್ಥರಾಗಿದ್ದರು. ಆದರೆ ಅಂಜುಶ್ರೀ ಮಾತ್ರ ದುರಂತ ಸಾವು ಕಂಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಅಂಜುಶ್ರೀ ಮತ್ತು ಆಕೆಯ ಸ್ನೇಹಿತರು ಡಿಸೆಂಬರ್ 31 ರಂದು ಉದುಮದ ಅಲ್ ರೊಮ್ಯಾನ್ಸಿಯಾ ಹೋಟೆಲ್ನಿಂದ ಕೇರಳದ ವಿಶೇಷ ಬಿರಿಯಾನಿ ಕುಜಿಮಂತಿಯನ್ನು ಆರ್ಡರ್ ಮಾಡಿದ್ದರು. ಆಕೆಯ ಸೋದರಿ ಅನುಶ್ರೀ ಪ್ರಕಾರ, ಅಂಜು ಸೇರಿ ನಾಲ್ಕು ಜನ ಬಿರಿಯಾನಿ ಸೇವಿಸಿದ್ದಾರೆ ಮತ್ತು ಅವರಲ್ಲಿ ಇಬ್ಬರಿಗೆ ತಕ್ಷಣ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಅಂಜುಶ್ರೀ ಅಸ್ವಸ್ಥಗೊಂಡಿದ್ದರಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾಥಮಿಕ ಚಿಕಿತ್ಸೆ ಬಳಿಕ ಆಕೆ ಮನೆಗೆ ಮರಳಿದ್ದಳು. ಆದರೆ, ಶುಕ್ರವಾರ ಬೆಳಗ್ಗೆ ಮತ್ತೆ ಪ್ರಜ್ಞಾಹೀನಳಾಗಿದ್ದು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಶನಿವಾರ ಚಿಕಿತ್ಸೆ ಫಲಿಸದೇ ಅಂಜು ಕೊನೆಯುಸಿರೆಳೆದಳು.
ಘಟನೆಗೆ ಸಂಬಂಧಿಸಿದಂತೆ ಅಲ್ ರೊಮ್ಯಾನ್ಸಿಯಾ ಹೋಟೆಲ್ ಮಾಲೀಕ ಸೇರಿದಂತೆ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಹೊಟೇಲ್ಗೆ ಬೀಗ ಹಾಕಿ ಸೀಲ್ ಮಾಡಿದೆ. ಅಂಜು ಕುಟುಂಬ ನೀಡಿದ ದೂರಿನ ಮೇರೆಗೆ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಬಗ್ಗೆ ಕುತೂಹಲ ಮೂಡಿದ್ದು ಬಿರಿಯಾನಿಯಲ್ಲಿ ಏನಿದ್ದಿರಬಹುದು ಎಂಬ ಬಗ್ಗೆ ಕುತೂಹಲ ಇದೆ. ವರದಿ ಆಧರಿಸಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ.
Kerala Woman dies after eating Biryani, three including restaurant owner taken to custody.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm