ಬ್ರೇಕಿಂಗ್ ನ್ಯೂಸ್
09-01-23 12:43 pm HK News Desk ದೇಶ - ವಿದೇಶ
ಡಾಕರ್, ಜ. 9: ಭೀಕರ ಬಸ್ ಅಪಘಾತದಲ್ಲಿ 40 ಮಂದಿ ದುರ್ಮರಣಕ್ಕೀಡಾಗಿದ್ದು, ಹಲವರು ಗಾಯಗೊಂಡಿರುವ ದಾರುಣ ಘಟನೆ ಕೇಂದ್ರ ಸೆನೆಗಲ್ನಲ್ಲಿ ನಡೆದಿದೆ.
ಸಾರ್ವಜನಿಕ ಬಸ್ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಕನಿಷ್ಠ 78 ಜನರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮಾಹಿತಿ ನೀಡಿದ್ದಾರೆ.
ಕಾಫ್ರಿನ್ ಪ್ರದೇಶದ ಗ್ನಿವಿ ಗ್ರಾಮದಲ್ಲಿ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಟ್ವೀಟ್ನಲ್ಲಿ ತಿಳಿಸಿದ್ದಾರೆ. “ಇಂದು ಗ್ನಿಬಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 40 ಜನರು ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಿಂದ ತೀವ್ರ ದುಃಖಿತನಾಗಿದ್ದೇನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಅವರಿಗೆ ಅಗತ್ಯ ವೈದ್ಯಕೀಯ ನೆರವು ಒದಗಿಸಲಾಗುವುದು” ಎಂದು ತಿಳಿಸಿದ್ದಾರೆ.
ಸೋಮವಾರದಿಂದ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದ ಅವರು, ರಸ್ತೆ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಸಭೆ ನಡೆಸುವುದಾಗಿ ಮ್ಯಾಕಿ ಸಾಲ್ ಹೇಳಿದ್ದಾರೆ. ಕಳಪೆ ಗುಣಮಟ್ಟದ ರಸ್ತೆಗಳು, ಚಾಲಕರು ನಿಯಮಗಳನ್ನು ಪಾಲಿಸದ ಕಾರಣ ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಮೋಟಾರ್ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ.
2017ರಲ್ಲಿ, ಎರಡು ಬಸ್ಗಳು ಅಪಘಾತಕ್ಕೀಡಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದರು. ಅವರಲ್ಲಿ ಅನೇಕರು ತೀರ್ಥಯಾತ್ರೆಗಾಗಿ ಕೇಂದ್ರ ಪಟ್ಟಣವಾದ ತೌಬಾ ಕಡೆಗೆ ಹೋಗುತ್ತಿದ್ದರು.
At least 40 people were killed and dozens injured in a bus crash in central Senegal, the country’s president said Sunday. President Macky Sall tweeted that the collision happened in Gnivy village, in the Kaffrine region, at about 3:30 a.m. “I am deeply saddened by the tragic road accident today in Gniby causing 40 deaths and many serious injuries. I extend my heartfelt condolences to the families of the victims and wish a speedy recovery to the injured,” said Sall.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm