ಬ್ರೇಕಿಂಗ್ ನ್ಯೂಸ್
09-01-23 01:57 pm HK News Desk ದೇಶ - ವಿದೇಶ
ನವದೆಹಲಿ, ಜ.9 : ಉತ್ತರಾಖಂಡ್ನಲ್ಲಿ ದಿಢೀರಾಗಿ ಭೂಮಿ ಬಾಯ್ತೆರೆದಿದ್ದು ಜನರು ತತ್ತರಿಸಿದ್ದಾರೆ. ರಸ್ತೆ, ಹೆದ್ದಾರಿ, ನೂರಾರು ಮನೆಗಳು ಬಿರುಕು ಬಿಟ್ಟಿದ್ದು ಪರಿಸ್ಥಿತಿ ಗಂಭೀರವಾಗಿದ್ದನ್ನು ತಿಳಿದ ಪ್ರಧಾನಿ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.
ಭೂಕುಸಿತದಿಂದಾಗಿ ಚಮೋಲಿ ಜಿಲ್ಲೆಯ ಜೋಷಿಮಠ ಸ್ಥಿತಿ ಅಯೋಮಯ ಎನ್ನುವಂತಾಗಿದೆ. ಸುಮಾರು 550ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿದ್ದು 3 ಸಾವಿರ ಕುಟುಂಬಗಳು ಆತಂಕದಲ್ಲಿವೆ. ಜನರನ್ನು ರಕ್ಷಣಾ ದೃಷ್ಟಿಯಿಂದ ಬೇರೆಡೆ ಸ್ಥಳಾಂತರಿಸಲಾಗಿದೆ. ಮನೆ ಮಾತ್ರವಲ್ಲದೆ ರಸ್ತೆ, ಕೃಷಿ ಭೂಮಿಯಲ್ಲಿ ಭಾರೀ ಬಿರುಕು ಬಿದ್ದಿವೆ. ಬಿರುಕು ಬಿಟ್ಟ ಕೆಲವೆಡೆ ಭೂಮಿಯಿಂದ ನೀರು ಉಕ್ಕಿ ಬರುತ್ತಿದೆ. ಇದರಿಂದಾಗಿ ಯಾವುದೇ ಸಂದರ್ಭದಲ್ಲಿ ಈ ಪ್ರದೇಶ ಕುಸಿದು ಹೋಗುವ ಆತಂಕ ವ್ಯಕ್ತವಾಗಿದೆ.

ಕೇದಾರನಾಥ, ಬದರಿನಾಥ ರೀತಿಯಲ್ಲೇ ಲಕ್ಷಾಂತರ ಭಕ್ತರು ಭೇಟಿ ನೀಡುವ ಪಟ್ಟಣಗಳಲ್ಲಿ ಒಂದು ಜೋಶಿಮಠ. ಬಹುತೇಕ ಕಟ್ಟಡಗಳು, ರಸ್ತೆಗಳು ಬಿರುಕು ಬಿಟ್ಟಿದ್ದು ಹಲವಾರು ಮನೆ, ದೇವಸ್ಥಾನಗಳು ಉರುಳಿ ಬಿದ್ದಿವೆ. ಹೀಗಾಗಿ ಜೋಶಿಮಠ ಪಟ್ಟಣವನ್ನು ಭೂಕುಸಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60 ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಹಿಮಾಲಯ ಪಟ್ಟಣದ ನಾಲ್ಕೈದು ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳನ್ನು ನಿರ್ಮಿಸಲಾಗಿದೆ. ಮಳೆ ಇಲ್ಲದಿದ್ದರೂ, ದಿಢೀರ್ ಭೂಕುಸಿತ ಆಗಿರುವುದು ಜನರಲ್ಲಿ ಆತಂಕ ಉಂಟುಮಾಡಿದೆ.
The Prime Minister's office held a high-level meeting after hundreds of buildings in Uttarakhand's Joshimath developed cracks due to shifting soil, prompting authorities to move hundreds of people from their homes in the area popular with pilgrims and tourists. PK Mishra, the principal secretary to Prime Minister Narendra Modi, held the review meeting with the cabinet secretary, other senior officials of the central government and members of the National Disaster Management Authority, an official statement said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm