ಬ್ರೇಕಿಂಗ್ ನ್ಯೂಸ್
17-10-20 04:22 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 17: ಬರ್ತ್ ಡೇ ಪಾರ್ಟಿ ಮಾಡೋಕೆ ಕರೆದು ವಿದ್ಯಾರ್ಥಿನಿಯ ಮೇಲೆ ಮೂವರು ಸೇರಿ ಅತ್ಯಾಚಾರಗೈದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಘಟನೆ ನಡೆದಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಜುಬಿಲಿ ಹಿಲ್ಸ್ ನಿವಾಸಿಯಾಗಿರುವ ಪದವಿ ವಿದ್ಯಾರ್ಥಿನಿಯನ್ನು ಸ್ನೇಹಿತರು ಸೇರಿ ಬರ್ತ್ ಡೇ ಪಾರ್ಟಿಗೆ ಕರೆದಿದ್ದರು. ಮೂರು ತಿಂಗಳ ಹಿಂದೆ, ಪರಿಚಯವಾಗಿದ್ದ ಸ್ನೇಹಿತ ಎಂ. ಜೋಸೆಫ್ ಆಕೆಯನ್ನು ಹೋಟೆಲ್ ಗೆ ಆಹ್ವಾನಿಸಿದ್ದ. ಸಿಕಂದರಾಬಾದ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿಗೆ ಜೋಸೆಫ್ ಪರಿಚಯವಾದ ಬಳಿಕ ಗೆಳೆಯರಾಗಿದ್ದರು. ಆನಂತರ ಜೋಸೆಫ್ ಸ್ನೇಹಿತರಾದ ಬಿ. ನವೀನ್ ರೆಡ್ಡಿ ಮತ್ತು ಆರ್. ರಾಮು ಕೂಡ ಪರಿಚಿತರಾಗಿದ್ದರು.
ಬರ್ತ್ ಡೇ ಪಾರ್ಟಿ ಎಂದು ಬಂದಿದ್ದ ವಿದ್ಯಾರ್ಥಿನಿಯನ್ನು ಸೇರಿಕೊಂಡ ಮೂವರು, ಕೆ.ಪಿ.ಹೆಚ್.ಬಿ. ಮೆಟ್ರೋ ನಿಲ್ದಾಣದ ಸಮೀಪವಿರುವ ಹೋಟೆಲ್ ಗೆ ಹೋಗಿದ್ದಾರೆ. ಹೊಟೇಲ್ ಪಾರ್ಟಿಯಲ್ಲಿ ಅಮಲು ಬರುವ ಪದಾರ್ಥ ಬೆರೆಸಿದ್ದ ಕೇಕ್ ಅನ್ನು ವಿದ್ಯಾರ್ಥಿನಿಗೆ ತಿನ್ನಿಸಿದ ಕಾಮುಕರು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.


ಹುಡುಗಿಗೆ ಎಚ್ಚರವಾದ ನಂತರ ಆರೋಪಿಗಳು, ಆಕೆಯನ್ನು ಬೆದರಿಸಿ ಕಳಿಸಿದ್ದಾರೆ. ಘಟನೆ ನಡೆದ ಒಂದೆರಡು ದಿನಗಳ ನಂತರ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿ ತನ್ನ ತಾಯಿಗೆ ಮಾಹಿತಿ ನೀಡಿದ್ದು ಪೋಷಕರು ಜುಬಿಲಿ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಕುಕಟಪಲ್ಲಿ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
A degree student was numbed and raped by three teenagers at a hotel room in Kukatpally a few days ago. The girl, a resident of Jubilee Hills, was invited to the hotel by a friend M Joseph, 20, for his birthday party on October 5.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am