ಬ್ರೇಕಿಂಗ್ ನ್ಯೂಸ್
17-01-23 09:06 pm HK News Desk ದೇಶ - ವಿದೇಶ
ನವದೆಹಲಿ, ಜ.17: ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೆ ವರುಣ್ ಗಾಂಧಿಗೆ ಆತನ ಸಿದ್ಧಾಂತವೇ ಅಡ್ಡಿಯಾಗುತ್ತದೆ. ನಮ್ಮ ಕುಟುಂಬಕ್ಕೆ ಒಂದು ಸಿದ್ಧಾಂತ ಇದೆ, ವರುಣ್ ಗಾಂಧಿಯ ಸಿದ್ಧಾಂತ ಬೇರೆಯೇ ಇದೆ. ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಂಡರೆ ಅವರಿಗೇ ಸಮಸ್ಯೆಯಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ್ದಾರೆ.
ವರುಣ್ ಗಾಂಧಿ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬ ಪ್ರಶ್ನೆಗೆ ರಾಹುಲ್ ವ್ಯತಿರಿಕ್ತ ಉತ್ತರ ನೀಡಿದ್ದಾರೆ. ವರುಣ್ ಗಾಂಧಿ ಬಿಜೆಪಿ ಪಕ್ಷವನ್ನು ಪ್ರತಿನಿಧಿಸುತ್ತಾರೆ. ಹಾಗಿರುವಾಗ ಅವರು ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುವುದು ಹೇಗೆ. ನಮ್ಮ ಕುಟುಂಬಕ್ಕೆ ಒಂದು ಸಿದ್ಧಾಂತ ಇದೆ, ವರುಣ್ ಗಾಂಧಿ ಅಳವಡಿಸಿಕೊಂಡಿರುವ ಸಿದ್ಧಾಂತವನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನನ್ನಿಂದ ಆರೆಸ್ಸೆಸ್ ಕಚೇರಿಗೆ ತೆರಳಲು ಸಾಧ್ಯವಿಲ್ಲ. ಅಂಥ ಜಾಗಕ್ಕೆ ಹೋಗುವುದಂದ್ರೆ ಆತ್ಮಹತ್ಯೆ ಮಾಡಿಕೊಂಡಂತೆ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಕೇಂದ್ರ ಸರಕಾರದ ಬಗ್ಗೆ ಅಸಮಾಧಾನದ ಹೇಳಿಕೆ ನೀಡುತ್ತಿರುವ ವರುಣ್ ಗಾಂಧಿ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ವದಂತಿ ಹಬ್ಬಿದೆ. ರಾಹುಲ್ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆಯೇ ಎಂಬ ಮಾತುಗಳೂ ಕೇಳಿಬಂದಿದ್ದವು. ಬಿಜೆಪಿ ಕುರಿತ ಹೇಳಿಕೆಗಳ ಪತ್ರಿಕಾ ತುಣುಕುಗಳು ವೈರಲ್ ಆಗುತ್ತಿದ್ದು, ಕೇಂದ್ರವನ್ನು ವಿರೋಧಿಸುವ ಅವರ ಹೇಳಿಕೆಗಳು ಚರ್ಚೆಗೆ ಕಾರಣವಾಗುತ್ತಿವೆ. ವರುಣ್ ಗಾಂಧಿ ಹೇಳಿಕೆಗಳು ಬಿಜೆಪಿಗೂ ಇರಿಸುಮುರಿಸು ತರುತ್ತಿದ್ದು, ಕೆಲವು ವಿಚಾರಗಳ ಬಗ್ಗೆ ಅದು ಅವರ ವೈಯಕ್ತಿಕ ಹೇಳಿಕೆಯೆಂದು ಹೇಳಿ ಪಕ್ಷದ ನಾಯಕರು ದೂರ ನಿಲ್ಲುತ್ತಿದ್ದಾರೆ.


ಮನೇಕಾ ಗಾಂಧಿ ಮತ್ತು ವರುಣ್ ಗಾಂಧಿ ಉತ್ತರ ಪ್ರದೇಶದಲ್ಲಿ ಸಂಸದರಾಗಿದ್ದು, ತಮ್ಮ ಟ್ವಿಟರ್ ಇನ್ನಿತರ ಜಾಲತಾಣಗಳಲ್ಲಿ ಬಿಜೆಪಿ ಚಿಹ್ನೆಯನ್ನು ಬಳಸಿಕೊಳ್ಳುತ್ತಿಲ್ಲ. ಕಳೆದ ಉತ್ತರ ಪ್ರದೇಶ ಚುನಾವಣೆಯಲ್ಲೂ ಇವರಿಬ್ಬರು ಬಿಜೆಪಿ ಪರವಾಗಿ ಪ್ರಚಾರವನ್ನೂ ಮಾಡಿಲ್ಲ. ಪಕ್ಷದ ಯಾವುದೇ ಹೊಣೆಗಾರಿಕೆಯನ್ನೂ ಹೊಂದಿಲ್ಲ. ಹೀಗಾಗಿ ತಾಯಿ, ಮಗ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ವದಂತಿ ಹಬ್ಬಿದೆ. ಈ ನಡುವೆ, ರಾಹುಲ್ ಗಾಂಧಿ ನೀಡಿರುವ ಹೇಳಿಕೆಯು ವರುಣ್ ಗಾಂಧಿ ಮೊದಲು ಬಿಜೆಪಿಯಿಂದ ಹೊರಬರಬೇಕು. ಪಕ್ಷಕ್ಕೆ ರಾಜಿನಾಮೆ ನೀಡಿ ತನ್ನ ನಿಲುವನ್ನು ತೋರಿಸಬೇಕು ಎನ್ನುವುದನ್ನು ಪರೋಕ್ಷವಾಗಿ ಸೂಚಿಸಿದೆ.
Congress MP Rahul Gandhi, who is leading the pan-India foot march 'Bharat Jodo Yatra', today said he can "lovingly meet" and hug his cousin Varun Gandhi, who is a BJP leader, but can never support the ideology he subscribes to. He said he'd rather be beheaded than go to the office of Rashtriya Swayamsevak Sangh the ideological parent of rival BJP.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
18-07-26 12:48 pm
HK News Staffer
‘ಪ್ರಾಜೆಕ್ಟ್ ಮೇಘಾಲಯ’ ಸಂಚು ಸ್ಫೋಟ! ವಿಜಯ್ ಸರ್ಕಾರ...
18-07-26 12:22 pm
51 ಬಾರಿ ವಿಷಸರ್ಪದಿಂದ ಕಚ್ಚಿಸಿಕೊಂಡರೂ ಸಾವಿನಿಂದ ಪಾ...
17-07-26 10:32 am
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
18-07-26 12:34 pm
HK News Staffer
ಬಿ.ಸಿ. ರೋಡಿನಲ್ಲಿ ಯುವತಿ ಹತ್ಯೆ ಘಟನೆ ನೆಪದಲ್ಲಿ ಜಾ...
17-07-26 09:07 pm
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm