ಬ್ರೇಕಿಂಗ್ ನ್ಯೂಸ್
28-01-23 05:47 pm HK News Desk ದೇಶ - ವಿದೇಶ
ನವದೆಹಲಿ, ಜ.28: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ 313 ಕೋಟಿ ಗಳಿಕೆ ಕಂಡಿದೆ.
ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್ ರಾಜ್ ಫಿಲ್ಮ್ಸ್ ತಿಳಿಸಿದೆ.

ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Bollywood superstar Shah Rukh Khan made a grand comeback to the big screen with 'Pathaan', which has minted a whopping Rs 313 crore in worldwide gross earnings in three days, movie critic Taran Adarsh said on Saturday 'Pathaan' marks SRK's comeback in a lead role after five years. He last played the lead in 'Zero' in 2018, which turned out to be a massive failure at the box office.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm