ಬ್ರೇಕಿಂಗ್ ನ್ಯೂಸ್
28-01-23 05:47 pm HK News Desk ದೇಶ - ವಿದೇಶ
ನವದೆಹಲಿ, ಜ.28: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಮುಖ್ಯ ಭೂಮಿಕೆಯಲ್ಲಿರುವ ಹಿಂದಿಯ ಪಠಾಣ್ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೂರೇ ದಿನಗಳಲ್ಲಿ 313 ಕೋಟಿ ಗಳಿಕೆ ಕಂಡಿದೆ.
ಜನವರಿ 25ರಂದು ತೆರೆ ಕಂಡ ಚಿತ್ರ ಮೂರನೇ ದಿನ ಹಿಂದಿಯಲ್ಲಿ ₹38 ಕೋಟಿ ನಿವ್ವಳ ಗಳಿಕೆ ಕಂಡಿದೆ. ಇತರೆ ಭಾಷೆಗಳಲ್ಲಿ ₹1.25 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಣ ಮಾಡಿರುವ ಯಶ್ ರಾಜ್ ಫಿಲ್ಮ್ಸ್ ತಿಳಿಸಿದೆ.

ಮೂರನೇ ದಿನ ಚಿತ್ರವು ಭಾರತದಲ್ಲಿ ₹39.25 ನಿವ್ವಳ ಗಳಿಕೆ (ಒಟ್ಟು ₹47ಕೋಟಿ) ಕಂಡಿದ್ದು, ವಿದೇಶದಲ್ಲಿ ಒಟ್ಟು ₹43 ಕೋಟಿ ಗಳಿಸಿದೆ. ಒಟ್ಟಾರೆ ವಿಶ್ವದಾದ್ಯಂತ ಮೂರನೇ ದಿನದ ಗಳಿಕೆ ₹90 ಕೋಟಿ ಆಗಿದೆ’ ಎಂದು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
4 ವರ್ಷಗಳ ದೀರ್ಘ ವಿರಾಮದ ಬಳಿಕ ತೆರೆ ಕಂಡಿರುವ ಶಾರುಖ್ ಖಾನ್ ಅವರ ಚಿತ್ರ ಮೊದಲ ದಿನವೇ ವಿಶ್ವದಾದ್ಯಂತ ₹106 ಕೋಟಿ ಗಳಿಸಿತ್ತು. ಎರಡನೇ ದಿನ ₹113.6 ಕೋಟಿ ಮತ್ತು ಮೂರನೇ ದಿನ ₹90 ಕೋಟಿ ಗಳಿಸಿದೆ.

ಮೂರು ದಿನಗಳ ಬಳಿಕ ಚಿತ್ರ ಭಾರತದಲ್ಲಿ ₹201 ಕೋಟಿ ಮತ್ತು ವಿದೇಶದಲ್ಲಿ ₹112 ಕೊಟಿ ಗಳಿಕೆ ಕಂಡಿದೆ. ಪಠಾಣ್ ಚಿತ್ರವು ಮೊದಲ ದಿನ ಭಾರತ ಮತ್ತು ವಿದೇಶದಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಪಠಾಣ್ ಚಿತ್ರವನ್ನು ವಿಶ್ವದಾದ್ಯಂತ ಇರುವ ಭಾರತೀಯರು ಆಶೀರ್ವದಿಸಿದ್ದಾರೆ. ಚಿತ್ರ ಮುನ್ನುಗ್ಗುತ್ತಿರುವ ಪರಿ ಅಭೂತಪೂರ್ವ ಮತ್ತು ಐತಿಹಾಸಿಕವಾದದ್ದು’ಎಂದು ಯಶ್ ರಾಜ್ ಫಿಲ್ಮ್ಸ್ ಸಿಇಒ ಅಕ್ಷಯೆ ವಿಧಾನಿ ಹೇಳಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ಪ್ರಕಾರ, ಪಠಾಣ್ ಚಿತ್ರವು 21 ಬಾಕ್ಸ್ ಆಫೀಸ್ ದಾಖಲೆಗಳನ್ನು ಮುರಿದಿದೆ. ಚಿತ್ರದಲ್ಲಿ ಸಲ್ಮಾನ್ ಖಾನ್, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Bollywood superstar Shah Rukh Khan made a grand comeback to the big screen with 'Pathaan', which has minted a whopping Rs 313 crore in worldwide gross earnings in three days, movie critic Taran Adarsh said on Saturday 'Pathaan' marks SRK's comeback in a lead role after five years. He last played the lead in 'Zero' in 2018, which turned out to be a massive failure at the box office.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm