ಬ್ರೇಕಿಂಗ್ ನ್ಯೂಸ್
06-02-23 10:53 am HK News Desk ದೇಶ - ವಿದೇಶ
ಢಾಕಾ, ಫೆ.6: ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ವಾಯುವ್ಯ ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳ ಮೇಲೆ ಶನಿವಾರ ರಾತ್ರಿ ಸರಣಿ ದಾಳಿ ನಡೆಸಿದ್ದಾರೆ.
ಬಾಂಗ್ಲಾದೇಶದಲ್ಲಿ 14 ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿದ್ದು, ವಿಗ್ರಹಗಳನ್ನು ಧ್ವಂಸ ಮಾಡಲಾಗಿದೆ. ಘಟನೆಯ ನಂತರ, ಬಾಂಗ್ಲಾದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಜೀವ ಮತ್ತು ಆಸ್ತಿಯ ಬಗ್ಗೆ ಭಯಭೀತರಾಗಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಿಂದೂಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.



ವರದಿ ಪ್ರಕಾರ, ವಿಧ್ವಂಸಕ ಘಟನೆಯು ಬಾಂಗ್ಲಾದೇಶದ ವಾಯುವ್ಯ ಪ್ರದೇಶದ ಠಾಕೂರ್ಗಾಂವ್ ಪರಿಸರದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಸಿಸುವ ಹಿಂದೂ ಸಮುದಾಯದ ಮುಖಂಡ ಬಿದ್ಯನಾಥ್ ಬರ್ಮನ್ ಪ್ರಕಾರ, ಶನಿವಾರ ರಾತ್ರಿ ಮತ್ತು ಭಾನುವಾರದ ನಸುಕಿನಲ್ಲಿ ಅಪರಿಚಿತರು ಕತ್ತಲಿನ ಸಮಯದಲ್ಲಿ ದೇವಾಲಯಗಳ ಮೇಲೆ ಯೋಜಿತ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಕೋಲು ಮತ್ತಿತರ ಆಯುಧಗಳೊಂದಿಗೆ ಬಂದ ದುಷ್ಕರ್ಮಿಗಳು 14 ದೇವಸ್ಥಾನಗಳನ್ನು ಧ್ವಂಸಗೊಳಿಸಿದ್ದಾರೆ. ಈ ಸಂದರ್ಭದಲ್ಲಿ, ಅನೇಕ ವಿಗ್ರಹಗಳನ್ನು ಮುರಿದು ಕೆರೆ, ಕೊಳಕ್ಕೆ ಎಸೆದಿದ್ದಾರೆ.


ದೇವಾಲಯಗಳ ಮೇಲೆ ದಾಳಿ ನಡೆಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಬರ್ಮನ್ ಹೇಳಿದ್ದಾರೆ. ಕತ್ತಲೆಯಿಂದಾಗಿ ಯಾರೂ ಅವರನ್ನು ನೋಡಲಿಲ್ಲ. ಘಟನೆ ಬೆಳಕಿಗೆ ಬಂದಿದ್ದರಿಂದ ಈ ಪ್ರದೇಶದಲ್ಲಿ ವಾಸಿಸುವ ಹಿಂದೂಗಳು ತಮ್ಮ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ ಮತ್ತು ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು. ಮುಸ್ಲಿಂ ಬಾಂಧವರೊಂದಿಗೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಈವರೆಗೂ ಈ ರೀತಿಯ ಘಟನೆ ಇಲ್ಲಿ ನಡೆದದ್ದಿಲ್ಲ. ಇಲ್ಲಿ ಮುಸ್ಲಿಮರು ಮೆಜಾರಿಟಿ ಇದ್ದರೂ, ನಾವು ಸೌಹಾರ್ದ ಹೊಂದಿದ್ದೆವು. ಇದು ಯಾರೋ ಕಿಡಿಗೇಡಿಗಳು ಸಾನರಸ್ಯ ಕದಡುವುದಕ್ಕಾಗಿ ನಡೆಸಿರುವ ಕೃತ್ಯ ಎಂದು ಹಿಂದು ಸಮುದಾಯದ ನಾಯಕ ಸಮರ್ ಚಟರ್ಜಿ ಹೇಳಿದ್ದಾರೆ.
14 Hindu temples were vandalised by unidentified miscreants in northwestern Bangladesh in a series of orchestrated attacks overnight, police said on Sunday, as reported by the news agency PTI. "Unidentified people carried out the attacks under the cover of darkness, vandalising idols in 14 temples in three unions (lowest local government tier)," said Bidyanath Barman, a Hindu community leader at Baliadangi) “upazila” or “sub-district” in Thakurgaon.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm