ಬ್ರೇಕಿಂಗ್ ನ್ಯೂಸ್
08-02-23 11:06 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಫೆ.8 : ಕೇರಳದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರೊಬ್ಬರು ಬುಧವಾರ ಮಗುವಿಗೆ ಜನ್ಮ ನೀಡಿದ್ದು, ಇದು ದೇಶದ ಮೊದಲ ಪ್ರಕರಣ ಎನ್ನಲಾಗಿದೆ. ಬುಧವಾರ ಬೆಳಗ್ಗೆ 9.30ರ ವೇಳೆಗೆ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಸಹದ್ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಜಹಾದ್ ಅವರ ಸಂಗಾತಿ ಜಿಯಾ ಪಾವಲ್ ತಿಳಿಸಿದ್ದಾರೆ.
‘ಮಗು ಮತ್ತು ಸಹಾದ್ ಇಬ್ಬರೂ ಆರೋಗ್ಯವಾಗಿದ್ದಾರೆ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಯಾ, ನವಜಾತ ಶಿಶುವಿನ ಲಿಂಗವನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ.
![]()
ಇತ್ತೀಚೆಗಷ್ಟೇ ಜಿಯಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಸಹಾದ್ ಅವರೀಗ ಎಂಟು ತಿಂಗಳ ಗರ್ಭಿಣಿ ಎಂದು ಘೋಷಿಸಿದ್ದರು. ‘ನಾನು ತಾಯಿಯಾಗುವ ಮತ್ತು ಅವನು ತಂದೆಯಾಗುವ ಕನಸನ್ನು ನನಸಾಗಿಸಿಕೊಳ್ಳಲಿದ್ದೇವೆ. ಎಂಟು ತಿಂಗಳ ಭ್ರೂಣವು ಈಗ ಸಹಾದ್ ಹೊಟ್ಟೆಯಲ್ಲಿ ಬೆಳೆಯುತ್ತಿದೆ. ನಮಗೆ ತಿಳಿದುಬಂದ ಮಾಹಿತಿ ಪ್ರಕಾರ, ಭಾರತದಲ್ಲಿ ಲಿಂಗಪರಿವರ್ತಿತ ಪುರುಷ (ಟ್ರಾನ್ಸ್ಮ್ಯಾನ್) ಗರ್ಭಧಾರಣೆ ಮಾಡಿರುವುದು ಇದೇ ಮೊದಲು’ ಎಂದೂ ಜಿಯಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ತಿಳಿಸಿದ್ದರು.
ನಾನು ಗರ್ಭಿಣಿಯಾಗುವ ಬಗ್ಗೆ ಎಂದಿಗೂ ಯೋಚಿಸಿರಲಿಲ್ಲ. ಒಂದು ವೇಳೆ ಹಾಗೆ ಮೊದಲೇ ಯೋಚಿಸಿದ್ದರೆ ಶಸ್ತ್ರಚಿಕಿತ್ಸೆಯ ಮೂಲಕ ನನ್ನ ಸ್ತನಗಳನ್ನು ತೆಗೆಸಿಕೊಳ್ಳುತ್ತಿರಲಿಲ್ಲ’ ಎಂದೂ ಸಹಾದ್ ತಿಳಿಸಿದ್ದರು.
ಹುಟ್ಟಿನಿಂದ ಹೆಣ್ಣಾಗಿದ್ದ ಸಹಾದ್, ಲಿಂಗಪರಿವರ್ತಿತ ಪುರುಷನಾಗಿದ್ದು, ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಮಗು ಹೊಂದಬೇಕೆಂಬ ಆಸೆಯಿಂದ ಹಾರ್ಮೋನ್ ಚಿಕಿತ್ಸೆಯನ್ನು ನಿಲ್ಲಿಸಿದ್ದರು. ಸಹಾದ್ ಅವರ ಸಂಗಾತಿ ಜಿಯಾ ಪಾವಲ್ ಹುಟ್ಟಿನಿಂದ ಗಂಡಾಗಿದ್ದು, ಲಿಂಗಪರಿವರ್ತನೆಯ ಮೂಲಕ ಹೆಣ್ಣಾಗಿದ್ದಾರೆ. ಈಗ ಸಹಾದ್ ಮಗುವಿಗೆ ಜನ್ಮ ನೀಡಿದ್ದು ಹೊಸ ದಾಖಲೆ ಸೇರಿದ್ದಾರೆ.
A Keralite transgender couple, who recently announced pregnancy, was blessed with a baby at a state-run hospital in Kozhikode on Wednesday, considered to be the first such case in the country. "The baby was born by around 9.30 am through a Cesarean Section at the Government Medical College Hospital," Ziya Paval, one of the trans partners, told PTI. Both the baby and Zahhad, her partner who delivered the child, are doing well, Ms Paval added.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm