ಬ್ರೇಕಿಂಗ್ ನ್ಯೂಸ್
09-02-23 07:01 pm HK News Desk ದೇಶ - ವಿದೇಶ
ನವದೆಹಲಿ, ಫೆ.9: ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಭಾಷಣ ಮಾಡುತ್ತಿದ್ದಾಗ ಪ್ರತಿಪಕ್ಷ ಸದಸ್ಯರು ಮೋದಿ- ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ. ಪ್ರಧಾನಿ ಭಾಷಣದುದ್ದಕ್ಕೂ ಕಾಂಗ್ರೆಸ್, ಡಿಎಂಕೆ, ಟಿಎಂಸಿ ಸಂಸದರು ಸದನದ ಬಾವಿಗಿಳಿದು ಮೋದಿ – ಅದಾನಿ ಭಾಯಿ ಭಾಯಿ ಎಂದು ಘೋಷಣೆ ಕೂಗಿದ್ದಾರೆ.
ಇದೇ ವೇಳೆ, ಮೋದಿ ಪ್ರತಿಭಟನಾಕಾರರಿಗೆ ಪ್ರತಿಯಾಗಿ ಕವನವನ್ನು ಓದಿ ಟಾಂಗ್ ನೀಡಿದ್ದಾರೆ. ನಿಮ್ಮಲ್ಲಿ ಕೆಸರು ಇದೆ, ನನ್ನಲ್ಲಿ ಗುಲಾಬ್ ಇದೆ, ನೀವು ಎಷ್ಟೇ ಕೆಸರು ಎರಚಿದರೂ, ಅಲ್ಲೆಲ್ಲೆ ಕಮಲ ಅರಳುತ್ತದೆ ಎನ್ನುವ ಕವನವನ್ನು ಹೇಳಿದರು. ಆಮೂಲಕ ನಿಮ್ಮ ಕೆಸರೆರಚಾಟಕ್ಕೆ ಎದೆಗುಂದಲ್ಲ, ಇದರಿಂದ ಕಮಲ ಮತ್ತಷ್ಟು ಅರಳುತ್ತದೆ ಅನ್ನುವುದನ್ನು ಮೋದಿ ಸದನದಲ್ಲಿ ಹೇಳಿದ್ದಾರೆ.

ಇತ್ತೀಚೆಗೆ ಉದ್ಯಮಿ ಗೌತಮ್ ಅದಾನಿ ಬಗ್ಗೆ ಅಮೆರಿಕದ ಕಂಪನಿ ನೀಡಿರುವ ವರದಿ ಜಂಟಿ ಸದನ ಸಮತಿಯಿಂದ ತನಿಖೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಕಳೆದ ಮೂರು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದವು. ಆದರೆ, ಜಂಟಿ ಸದನ ಸಮಿತಿಯ ತನಿಖೆಯಾಗಲೀ, ಸದನದಲ್ಲಿ ಆ ಕುರಿತು ಚರ್ಚೆ ನಡೆಸುವುದಕ್ಕಾಗಲೀ ಬಿಜೆಪಿ ಸರಕಾರ ಒಪ್ಪಿಗೆ ನೀಡಿರಲಿಲ್ಲ.

ಅದಾನಿ ಉದ್ಯಮದ ತನಿಖೆಗೆ ಸುಪ್ರೀಂಗೆ ಅರ್ಜಿ
ಇದೇ ವೇಳೆ, ಅದಾನಿ ಉದ್ಯಮದ ಕುರಿತು ಹಿಂಡನ್ ಬರ್ಗ್ ನೀಡಿರುವ ವರದಿ ಕುರಿತು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕೆಂದು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ವಿಶಾಲ್ ತಿವಾರಿ ಸಲ್ಲಿಸಿರುವ ಅರ್ಜಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದು, ಶುಕ್ರವಾರ ವಿಚಾರಣೆ ನಡೆಸಲಿದೆ. ನ್ಯಾ.ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸಾರ್ವಜನಿಕ ಹಿತಾಸಕ್ತಿಯ ಈ ಅರ್ಜಿ ಸಲ್ಲಿಕೆಯಾಗಿತ್ತು. ಇದಲ್ಲದೆ, ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡಲಾಗುವ 500 ಕೋಟಿಗೂ ಹೆಚ್ಚಿನ ಮೊತ್ತದ ಸಾಲದ ಮಂಜೂರಾತಿ ನೀತಿಯನ್ನು ಮೇಲ್ವಿಚಾರಣೆ ಮಾಡಲು ಪ್ರತ್ಯೇಕ ಸಮಿತಿಯನ್ನು ರಚಿಸಬೇಕೆಂದೂ ಅರ್ಜಿಯಲ್ಲಿ ವಿಶಾಲ್ ಕೋರಿದ್ದಾರೆ.
As Prime Minister Narendra Modi began addressing the Rajya Sabha, the Opposition began raising slogans of ‘Modi-Adani bhai bhai’. However, the PM remained undeterred and took a jibe at the protesting lawmakers with poetic lines.“Keechad uske paas tha, mere paas gulaal. Jo jiske paas tha, diya usne woh uchaal (They had mud, I had colours. Whosoever had whatever they flung in the air)," PM Modi said, adding “jitna keechad uchaaloge, kamal utna hi khilega" (the more mud-slinging, the more number of lotus will bloom).
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm