ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.

ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm