ಬ್ರೇಕಿಂಗ್ ನ್ಯೂಸ್
21-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೂಬರ್ 21: ಜಮ್ಮು ಕಾಶ್ಮೀರದಲ್ಲಿ ಶಾಂತಿ ಮರು ಸ್ಥಾಪನೆ ಮಾಡುತ್ತಿರುವ ಸೇನಾ ಪಡೆಗಳ ಮೇಲೆ ಪಾಕಿಸ್ಥಾನ, ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿರುವ ಮಾಹಿತಿ ಹೊರಬಿದ್ದಿದೆ.
ಸಿರಿಯಾದಲ್ಲಿ ಭದ್ರತಾ ಪಡೆಗಳ ಮೇಲೆ ಐಸಿಸ್ ಭಯೋತ್ಪಾದಕರು ಡ್ರೋಣ್ ದಾಳಿ ನಡೆಸುತ್ತಿದ್ದಾರೆ. ಅದೇ ರೀತಿಯಲ್ಲಿ ಗಡಿಭಾಗದಲ್ಲಿ ಬೀಡು ಬಿಟ್ಟಿರುವ ಭಾರತದ ಭದ್ರತಾ ಪಡೆಗಳ ಮೇಲೆ ಡ್ರೋಣ್ ಮೂಲಕ ಬಾಂಬ್ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಮತ್ತು ಉಗ್ರರು ಯೋಜನೆ ಹಾಕಿದ್ದಾರೆ. ಕಡಿಮೆ ಬೆಲೆಯ ಡ್ರೋಣ್ ಗಳನ್ನು ಬಳಸಿ, ಈ ದಾಳಿ ನಡೆಸಲು ಪಾಕಿಸ್ಥಾನದ ಐಎಸ್ಐ ಸಂಚು ರೂಪಿಸಿದೆ. ಪಾಕಿಸ್ಥಾನದ ಪಂಜಾಬ್ ಪ್ರಾಂತ್ಯದಲ್ಲಿ ಕಳೆದ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಜೈಷ್ ಮತ್ತು ಲಷ್ಕರ್ ಉಗ್ರವಾದಿ ಗುಂಪುಗಳ ಪ್ರಮುಖರ ಜೊತೆ ಐಎಸ್ಐ ಈ ಬಗ್ಗೆ ಚರ್ಚೆ ನಡೆಸಿದೆ ಎನ್ನುವ ಮಾಹಿತಿಯನ್ನು ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ. ಸಭೆಯಲ್ಲಿ ಮೂರು ಕಿಮೀ ವ್ಯಾಪ್ತಿಯ ಮತ್ತು 5 ಕೆಜಿ ಸ್ಫೋಟಕಗಳನ್ನು ಹೊತ್ತೊಯ್ಯಬಲ್ಲ ಡ್ರೋಣ್ ಗಳನ್ನು ಬಳಸಲು ಯೋಜನೆ ಹಾಕಲಾಗಿದೆ ಎನ್ನುವ ವಿಚಾರ ಹೊರಬಿದ್ದಿದೆ.
ಪಾಕಿಸ್ಥಾನದ ಕುತಂತ್ರಕ್ಕೆ ಭಾರತದ ಸೇನಾ ಪಡೆಯೂ ತಂತ್ರ ಹೂಡಿದ್ದು, ಯಾವುದೇ ಡ್ರೋಣ್ ಕಂಡುಬಂದರೂ ಹೊಡೆದುರುಳಿಸಲು ಸನ್ನದ್ಧವಾಗಿದೆ. ಗಡಿಭಾಗದಲ್ಲಿ ರಾಡಾರ್ ವ್ಯವಸ್ಥೆಯನ್ನು ಬಲಪಡಿಸಿದ್ದು, ಡ್ರೋಣ್ ಪತ್ತೆಗೆ ಸ್ಥಳೀಯ ಭದ್ರತಾ ಪಡೆಗಳಿಗೆ ತರಬೇತಿಯನ್ನೂ ನೀಡಲಾಗುತ್ತಿದೆ. ಗಡಿಭಾಗದಲ್ಲಿ ಶಸ್ತ್ರಾಸ್ತ್ರ, ನಕಲಿ ಕರೆನ್ಸಿ, ಮಾದಕ ವಸ್ತು ಸಾಗಿಸಲು ಪಾಕ್ ಉಗ್ರರು ಡ್ರೋಣ್ ಬಳಕೆ ಮಾಡುತ್ತಿರುವುದನ್ನು ಈಗಾಗಲೇ ಸೇನಾಪಡೆ ಪತ್ತೆ ಮಾಡಿದ್ದು, ಹಲವು ಬಾರಿ ಡ್ರೋಣ್ ಗಳನ್ನು ಹೊಡೆದುರುಳಿಸಿತ್ತು.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm