ಬ್ರೇಕಿಂಗ್ ನ್ಯೂಸ್
04-08-20 06:02 pm Headline Karnataka News Network ದೇಶ - ವಿದೇಶ
ಬೈರುತ್ (ಆಗಸ್ಟ್ 04); ಲೆಬನಾನ್ ರಾಜಧಾನಿ ಬೀರತ್ ನಲ್ಲಿ ಮಂಗಳವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 100ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೇಶದ ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಸ್ಫೋಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗುತ್ತಿದೆ.
ಕಳೆದ ಹಲವು ವರ್ಷಗಳಿಂದ ಯುದ್ಧಭೂಮಿಯಂತಾಗಿರುವ ಲೆಬನಾನ್ನಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಮೊರೆತ ನಿಶ್ಯಬ್ಧತೆಯನ್ನು ತಬ್ಬಿತ್ತು. ಆದರೆ, ಇಂದು ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿರುವ ಭಾರೀ ಸ್ಪೋಟವು ಲೆಬನಾನ್ನಲ್ಲಿ ಮತ್ತೆ ಆಘಾತದ ತರಂಗಗಳನ್ನು ಎಬ್ಬಿಸಿವೆ. ಈ ಸ್ಪೋಟದಲ್ಲಿ ನೂರಾರು ಜನ ಗಾಯಗೊಂಡಿದ್ದಲ್ಲದೆ ಹಲವಾರು ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.


ಆದರೆ, ಸ್ಪೋಟದ ರುವಾರಿ ಯಾರು? ಮತ್ತು ಈ ಸ್ಪೋಟಕ್ಕೆ ಕಾರಣ ಏನು? ಎಂಬ ಕುರಿತು ಈವರೆಗೆ ತಿಳಿದುಬಂದಿಲ್ಲ ಎಂದು ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am