ಬ್ರೇಕಿಂಗ್ ನ್ಯೂಸ್
21-10-20 05:29 pm Headline Karnataka News Network ದೇಶ - ವಿದೇಶ
ಚೀನಾ,ಅಕ್ಟೋಬರ್ 21 : ಒಂದೇ ಕುಟುಂಬದ ಒಂಬತ್ತು ಜನ ಸದಸ್ಯರು ಮನೆಯಲ್ಲಿ ಕಾರ್ನ್ ನೂಡಲ್ಸ್ ತಿಂದು ಸಾವನ್ನಪ್ಪಿರುವ ಘಟನೆ ಈಶಾನ್ಯ ಚೀನಾದ ಹೀಲಾಂಗ್ಜಿಯಾಂಗ್ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ನಡೆದಿದೆ.
ಹುದುಗಿಸಿದ ಜೋಳದ ಹಿಟ್ಟಿನ ನೂಡಲ್ ಅನ್ನು ಸುಮಾರು ಒಂದು ವರ್ಷಗಳ ಕಾಲ ಫ್ರಿಡ್ಜ್ನಲ್ಲಿ ಇಡಲಾಗಿತ್ತು. ಅದನ್ನು ಗಮನಿಸದೆ ಕುಟುಂಬ ಸೇವಿಸಿದೆ. ನೂಡಲ್ಸ್ನಲ್ಲಿದ್ದ ಬೊಂಗ್ರೆಕಿಕ್ ವಿಷಕಾರಿ ಆಮ್ಲದ ಪರಿಣಾಮ ಎಲ್ಲರೂ ಮೃತಪಟ್ಟಿದ್ದಾರೆ.
ಸ್ಯೂಡೋಮೊನಸ್ ಕೊಕೊವೆನೆನಾನ್ಸ್ ಎಂಬ ಬ್ಯಾಕ್ಟೀರಿಯನಿಂದ ಉತ್ಪತ್ತಿಯಾಗುವ ಬೊಂಗ್ರೆಕಿಕ್ ಆಮ್ಲದ ಹೆಚ್ಚಿನ ಸಾಂದ್ರತೆಯು ಕಾರ್ನ್ ನೂಡಲ್ಸ್ನಲ್ಲಿ ಪತ್ತೆಯಾಗಿದೆ, ಜೊತೆಗೆ ಅನಾರೋಗ್ಯಕ್ಕೆ ಒಳಗಾದವರ ದೇಹದಲ್ಲಿ ಗ್ಯಾಸ್ಟ್ರಿಕ್ ದ್ರವದಲ್ಲಿ ಪತ್ತೆಯಾಗಿದೆ ಎಂದು ಆರೋಗ್ಯ ಆಯೋಗ ತಿಳಿಸಿದೆ.
ಅಕ್ಟೋಬರ್ 5 ರ ಬೆಳಿಗ್ಗೆ 12 ಸದಸ್ಯರ ಕುಟುಂಬ ಕೂಟದಲ್ಲಿ, ಒಂಬತ್ತು ಜನ ಹುದುಗಿಸಿದ ಜೋಳದ ಹಿಟ್ಟಿನಿಂದ ತಯಾರಿಸಿದ ದಪ್ಪವಾದ ನೂಡಲ್ ಅನ್ನು ತಿಂದಿದ್ದರು. ಅಕ್ಟೋಬರ್ 10ರಂದು 8 ಜನ ಮೃತಪಟ್ಟರೆ, ಕೊನೆಯಲ್ಲಿ ಸೂಪ್ ಕುಡಿದು ಬದುಕುಳಿದಿದ್ದ ಮಹಿಳೆ ಸೋಮವಾರ ಸಾವಿಗೀಡಾಗಿದ್ದಾರೆ. ಆದರೆ ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ನೂಡಲ್ಸ್ ತಿನ್ನಲು ನಿರಾಕರಿಸಿದ್ದರು.
ಬೊಂಗ್ರೆಕಿಕ್ ಆಸಿಡ್, ಲಿವರ್, ಕಿಡ್ನಿ, ಹೃದಯ ಮತ್ತು ಮೆದುಳು ಒಳಗೊಂಡಂತೆ ಅನೇಕ ಅಂಗಗಳಿಗೆ ಗಂಭೀರವಾಗ ಹಾನಿಯುಂಟು ಮಾಡಬಲ್ಲದು. ಒಮ್ಮೆ ವಿಷ ಸೇವಿಸಿದರೆ, ಸಾವಿನ ಪ್ರಮಾಣವು ಶೇ. 40 ರಿಂದ 100% ವರೆಗೆ ಇರುತ್ತದೆ. ಹೆಚ್ಚಿನ ಉಷ್ಣಾಂಶದಲ್ಲಿ ಬೇಯಿಸಿದಾಗ ಬೊಂಗ್ರೆಕಿಕ್ ಆಸಿಡ್ ತಡೆಯಬಹುದು. ಇದೊಂದು ಮಾರಣಾಂತಿಕ ವಿಷ. ಹುದುಗಿಸಿದ ತೆಂಗಿನಕಾಯಿಯಿಂದಲೂ ಇದು ಉತ್ಪತಿಯಾಗುತ್ತದೆ ಎಂದು ಹೆಲಾಂಗ್ಜಿಯಾಂಗ್ನ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರದ ಆಹಾರ ಸುರಕ್ಷತಾ ನಿರ್ದೇಶಕ ಗಾವೋ ಫೈ ತಿಳಿಸಿದ್ದಾರೆ
ಕಲುಷಿತ ಆಹಾರ ಸೇವಿಸಿದ ಕೆಲವೇ ಗಂಟೆಗಳಲ್ಲಿ ಬೊಂಗ್ರೆಕಿಕ್ ಆಸಿಡ್ ರೋಗ ಲಕ್ಷಣಗಳು ಆರಂಭವಾಗುತ್ತವೆ. ಹೊಟ್ಟೆ ನೋವು, ಬೆವರುವುದು, ದೌರ್ಬಲ್ಯ ಮತ್ತು ಕೊನೆಯಲ್ಲಿ ಕೋಮಾಗೆ ಜಾರುತ್ತಾರೆ. 24 ಗಂಟೆಗಳಲ್ಲೇ ಸಾವು ಸಂಭವಿಸುತ್ತದೆ ಎಂದು ಗಾವೋ ಮಾಹಿತಿ ನೀಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm