ಬ್ರೇಕಿಂಗ್ ನ್ಯೂಸ್
21-02-23 07:39 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.21 : ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕಚ್ಚಿ ಎಳೆದಾಡಿ ಕೊಂದು ಹಾಕಿದ ಹೃದಯ ವಿದ್ರಾವಕ ಘಟನೆ ಹೈದರಾಬಾದ್ ನಲ್ಲಿ ನಡೆದಿದ್ದು ಇದರ ಸಿಸಿಟಿವಿ ವೈರಲ್ ಆಗಿದೆ.
ಹೈದರಾಬಾದ್ ನಗರದ ಅಪಾರ್ಟ್ಮೆಂಟ್ ಒಂದರ ಆವರಣದಲ್ಲಿ ಫೆ.19ರಂದು ಘಟನೆ ನಡೆದಿದೆ. ಬಾಲಕನ ತಂದೆ ಅಪಾರ್ಟ್ಮೆಂಟ್ ವಾಚ್ ಮನ್ ಆಗಿದ್ದು ಬಾಲಕ ಒಬ್ಬಂಟಿಯಾಗಿ ಹೊರಕ್ಕೆ ಬಂದಿದ್ದಾಗ ನಾಯಿಗಳು ಮುತ್ತಿಕೊಂಡಿವೆ. ಬಳಿಕ ಮೂರ್ನಾಲ್ಕು ನಾಯಿಗಳು ಒಟ್ಟಾಗಿದ್ದು ಮಗುವನ್ನು ಎಳೆದಾಡಿದ್ದು ಕಚ್ಚಿ ಕಚ್ಚಿ ಸಾಯಿಸಿದೆ.
ಮಗುವಿನ ಚೀರಾಟ ಕೇಳಿದ ತಂದೆ ಗಂಗಾಧರ್ ಓಡಿ ಬಂದಿದ್ದು ಗಂಭೀರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅಷ್ಟರಲ್ಲಿ ಮಗು ಸಾವು ಕಂಡಿತ್ತು. ಗಂಗಾಧರ್ ನಿಜಾಮ್ ನಗರದ ನಿವಾಸಿಯಾಗಿದ್ದು ಇತ್ತೀಚೆಗೆ ಹೈದರಾಬಾದ್ ನಗರಕ್ಕೆ ಬಂದು ನೆಲೆಸಿದ್ದ. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಮಗು ಸಾವನ್ನಪ್ಪಿದ ಘಟನೆಯ ದೃಶ್ಯ ಅಪಾರ್ಟ್ಮೆಂಟ್ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಟಾಣಿ ಮಗು ನಡೆದು ಬರುತ್ತಲೇ ನಾಯಿಗಳು ಮುತ್ತಿಕೊಂಡು ಮಾಂಸದ ಮುದ್ದೆಯ ರೀತಿ ಎಳೆದಾಡಿದ ಭೀಕರ ದೃಶ್ಯ ಸೆರೆಯಾಗಿದ್ದು ಮನಸ್ಸು ಕಲಕುವಂತಿದೆ. ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶವೂ ವ್ಯಕ್ತವಾಗಿದೆ.

ಬೀದಿ ನಾಯಿಗಳಿಂದ ಮಕ್ಕಳ ಸಾವಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ಏಳು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದ. ಬಿಲಾಸ್ಪುರದಲ್ಲಿರುವ ತನ್ನ ಮನೆಯ ಹಿಂಭಾಗದಲ್ಲಿ ಆಟವಾಡುತ್ತಿದ್ದಾಗಲೇ ಘಟನೆ ನಡೆದಿತ್ತು.
#hyderabad dog bite pic.twitter.com/mJkKOnaof3
— Sai vineeth(Journalist🇮🇳) (@SmRtysai) February 21, 2023
A horrific incident in which a pack of dogs attacked a four-year-old boy and killed him, came to light two days later on February 21. The boy, Pradeep, was attacked by four dogs on February 19,when he was walking on the road, closer to his father’s workplace in an automobile workshop, in Amberpet.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm