ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.
ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm