ಬ್ರೇಕಿಂಗ್ ನ್ಯೂಸ್
22-02-23 05:17 pm HK News Desk ದೇಶ - ವಿದೇಶ
ನವದೆಹಲಿ, ಫೆ.22 : ಕರ್ನಾಟಕದ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲು ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ತೀರ್ಮಾನಿಸಿದ್ದಾರೆ.
ಶಾಲೆ, ಕಾಲೇಜುಗಳಲ್ಲಿ ತರಗತಿ ಒಳಗೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕರ್ನಾಟಕ ಸರ್ಕಾರದ ಆದೇಶದ ಕುರಿತು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಭಿನ್ನ ತೀರ್ಪು ನೀಡಿತ್ತು. ಅಲ್ಲದೆ, ಈ ಬಗ್ಗೆ ವಿಸ್ತೃತ ಪೀಠಕ್ಕೆ ವರ್ಗಾಯಿಸುವಂತೆ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಕೇಳಿಕೊಂಡಿದ್ದರು. ಈ ನಡುವೆ, ಕರ್ನಾಟಕ ಸರ್ಕಾರದ ಹಿಜಾಬ್ ನಿಷೇಧ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟಿನಲ್ಲಿ ಉಳಿದುಕೊಂಡಿದ್ದು ಒಂದಷ್ಟು ವಿದ್ಯಾರ್ಥಿನಿಯರು ಬೇರೆ ಖಾಸಗಿ ಶಾಲೆಗೆ ಸೇರಿದ್ದರೆ ಬಡ ಕುಟುಂಬದ ವಿದ್ಯಾರ್ಥಿಗಳು ಸರಕಾರಿ ಶಾಲೆಯಲ್ಲೇ ಮುಂದುವರಿದಿದ್ದರು.

ಈ ಬಾರಿ ಮಾರ್ಚ್ 9 ರಿಂದ ಶಾಲೆಗಳಲ್ಲಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಿಜಾಬ್ ಹಾಕಿಯೇ ಹಾಜರಾಗಬೇಕಿದೆ. ಹಿಜಾಬ್ ಹಾಕಲಾಗದು ಎಂದು ಪರೀಕ್ಷೆ ಬರೆಯದೇ ಉಳಿದರೆ ಒಂದು ವರ್ಷ ವೇಸ್ಟ್ ಆಗುತ್ತದೆ. ಹೀಗಾಗಿ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ವಕೀಲರ ಮೂಲಕ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ.
ಕಳೆದ ವರ್ಷ ಅಕ್ಟೋಬರ್ 13 ರಂದು ವಿಭಜಿತ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಹಿಜಾಬ್ ವಿವಾದಕ್ಕೆ ಶಾಶ್ವತ ಪರಿಹಾರ ನೀಡಿರಲಿಲ್ಲ. ಹಿಜಾಬ್ ವಿವಾದ ಕುರಿತು ತೀರ್ಪು ನೀಡಲು ತ್ರಿಸದಸ್ಯ ಪೀಠ ಸ್ಥಾಪಿಸುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ ಹೇಳಿತ್ತು. ಇದರ ನಡುವೆ, ತುರ್ತಾಗಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕೆಂದು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಕೇಳಿಕೊಂಡಿದ್ದಾರೆ. ಆಮೂಲಕ ಹಿಜಾಬ್ ವಿಚಾರವನ್ನು ಮತ್ತೆ ಈ ಬಾರಿಯೂ ಪರೀಕ್ಷೆ ಸಂದರ್ಭದಲ್ಲಿ ಜೀವಂತ ಆಗಿಸಲು ಪ್ರಯತ್ನ ಸಾಗಿದೆ.
The hijab issue that came to the forefront last year in Mangaluru is back in focus with Supreme Court CJI DY Chandrachud saying that he will consider the Muslim girls’ plea seeking interim relief to allow them to attend exams in the government colleges, reported legal news website Live Law.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm