ಬ್ರೇಕಿಂಗ್ ನ್ಯೂಸ್
24-02-23 08:03 pm HK News Desk ದೇಶ - ವಿದೇಶ
ತಿರುವನಂತಪುರಂ, ಫೆ.24 : ಕೋಜಿಕ್ಕೋಡ್ ನಿಂದ ಸೌದಿಯ ದಮ್ಮಾಮ್ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ತಿಳಿಯುತ್ತಿದ್ದಂತೆ ಪೈಲಟ್ ಎಮೆರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಮುಂದಾಗಿದ್ದು ಇದೇ ವೇಳೆ ವಿಮಾನದಲ್ಲಿದ್ದ ಹೆಚ್ಚುವರಿ ಇಂಧನವನ್ನು ಸಮುದ್ರಕ್ಕೆ ಸುರಿದು ಅಪಾಯ ದೂರ ಮಾಡಿದ್ದಾರೆ.
ಕೋಜಿಕ್ಕೋಡ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 9.30ರ ವೇಳೆಗೆ ಟೇಕಾಫ್ ಆಗಿದ್ದ ವಿಮಾನದ ಹಿಂಭಾಗ ರನ್ ವೇಗೆ ಬಡಿದಿದೆ ಎನ್ನಲಾಗುತ್ತಿದ್ದು, ಇದರಿಂದ ಹೈಡ್ರಾಲಿಕ್ ಬ್ರೇಕ್ ನಲ್ಲಿ ಸಮಸ್ಯೆ ಉಂಟಾಗಿತ್ತು. ಕೂಡಲೇ ವಿಮಾನವನ್ನು ತುರ್ತು ಲ್ಯಾಂಡ್ ಮಾಡಬೇಕೆಂದು ಪೈಲಟ್ ಸೂಚನೆ ರವಾನಿಸಿದ್ದರು. ಕೊಚ್ಚಿ ಅಥವಾ ತಿರುವನಂತಪುರ ನಿಲ್ದಾಣಕ್ಕೆ ಒಯ್ಯಬೇಕಾಗಿತ್ತು. ವಿಮಾನದಲ್ಲಿ ಸುಮಾರು168 ಮಂದಿ ಪ್ರಯಾಣಿಕರಿದ್ದು ಸೌದಿ ಅರೇಬಿಯಾಗೆ ತೆರಳುತ್ತಿದ್ದರು. ವಿಮಾನದಲ್ಲಿ ಸಮಸ್ಯೆ ಆಗಿರುವುದು ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು.
ಆಕಾಶದಿಂದಲೇ ಸಮುದ್ರಕ್ಕೆ ಇಂಧನ ಸುರಿದ ಪೈಲಟ್
ವಿಮಾನವನ್ನು ತುರ್ತು ಭೂಸ್ಪರ್ಶ ಮಾಡುವ ವೇಳೆ ರನ್ ವೇ ವಿಮಾನದ ಹಿಂಭಾಗಕ್ಕೆ ಘರ್ಷಿಸಿದರೂ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇದ್ದುದರಿಂದ ಪೈಲಟ್ ಕಾಳಜಿ ಮೆರೆದಿದ್ದಾರೆ. ಹಾಗಾಗಿ ವಿಮಾನವನ್ನು ಸಮುದ್ರ ಮಾರ್ಗದಲ್ಲಿ ಹಾರಿಸಿ, ಆಕಾಶದಿಂದಲೇ ಸಮುದ್ರಕ್ಕೆ ಹೆಚ್ಚುವರಿ ಇಂಧನವನ್ನು ಸುರಿಯುವಂತೆ ಮಾಡಿದ್ದಾರೆ. ಆನಂತರ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಲ್ಯಾಂಡಿಂಗ್ ವೇಳೆ ಎಮರ್ಜೆನ್ಸಿ ಘೋಷಣೆ
ವಿಮಾನ ತುರ್ತು ಭೂಸ್ಪರ್ಶ ಆಗುತ್ತಿದ್ದ ಹಿನ್ನೆಲೆಯಲ್ಲಿ ಯಾವುದೇ ಸ್ಥಿತಿಯನ್ನು ಎದುರಿಸುವುದಕ್ಕೂ ಸಜ್ಜಾಗಿರುವಂತೆ ತಿರುವನಂತಪುರ ಏರ್ಪೋರ್ಟ್ ನಲ್ಲಿ ಸಂಪೂರ್ಣ ತುರ್ತು ಸ್ಥಿತಿ ಘೋಷಣೆ ಮಾಡಲಾಗಿತ್ತು. ವಿಮಾನ ಅಪಘಾತಕ್ಕೀಡಾದರೆ ತೆಗೆದುಕೊಳ್ಳಬೇಕಾದ ರಕ್ಷಣಾ ಕ್ರಮಗಳಿಗೆ ಸಿದ್ಧತೆ ಕೈಗೊಳ್ಳಲಾಗಿತ್ತು. ಅಗ್ನಿಶಾಮಕ ವಾಹನಗಳು, ರಕ್ಷಣಾ ಸಿಬ್ಬಂದಿ ಸರ್ವ ಸನ್ನದ್ಧರಾಗಿದ್ದರು.
A Saudi Arabia-bound Air India Express flight, that took off from Kozhikode international airport on Friday morning, made an emergency landing here after it developed a technical snag. After it developed a snag in its hydraulic systems, the flight en route to Dammam, was given permission to land at the international airport here around 12.15 pm. All the 182 passengers and crew are safe.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm