ಬ್ರೇಕಿಂಗ್ ನ್ಯೂಸ್
05-08-20 05:37 am Headline Karnataka News Network ದೇಶ - ವಿದೇಶ
ಬೈರುತ್, ಆಗಸ್ಟ್ 5: ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ನಿನ್ನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 78 ಮಂದಿಯಷ್ಟು ಮೃತಪಟ್ಟಿದ್ದು, 4000ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಸ್ಫೋಟದ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗುತ್ತಿದೆ.
ಕಳೆದ ಮೂರು ದಶಕಗಳಿಂದ ಲೆಬನಾನ್ ಯುದ್ಧಭೂಮಿಯಂತಾಗಿದ್ದು ಸ್ಪೋಟದ ಸದ್ದು , ಗುಂಡಿನ ಮೊರೆತ ಕಳೆದ ಕೆಲ ದಿನಗಳಿಂದ ತಗ್ಗಿದ್ದವು. ಆದರೆ ಈ ನಡುವೆ ಭೀಕರ ಸ್ಪೋಟ ಸಂಭವಿಸಿದೆ. ಬೈರುತ್ ನಗರದ ಬಂದರು ಪ್ರದೇಶದಲ್ಲಿ ಈ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದು 200 ಕಿಮೀ ದೂರದ ವರೆಗೆ ಅಪ್ಪಳಿಸಿದ್ದು ಸ್ಫೋಟದಿಂದಾಗಿ ಲೆಬನಾನ್ ನಗರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾರು 2 ಕಿ ಮೀ ನ ಸುತ್ತಳತೆಯಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ ಎನ್ನಲಾಗುತ್ತಿದೆ. ನ್ಯೂಕ್ಲಿಯರ್ ಬಾಂಬ್ ಸ್ಪೋಟದಂತೆ ಅಗಸದಲ್ಲಿ ಅಣಬೇ ಆಕೃತಿಯ ಹೊಗೆ ಸೃಷ್ಠಿಯಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಂದರು ಪ್ರದೇಶದ ರಾಸಾಯನಿಕ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ 2750 ಟನ್ ಅಮೋನಿಯಂ ನೈಟ್ರೇಟ್ ಶೇಖರಣೆ ಮಾಡಲಾಗಿತ್ತು. ಅದಕ್ಕೆ ಬೆಂಕಿ ಹತ್ತಿಕೊಂಡು ಸ್ಫೋಟ ಆಗಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆದರೆ ಲೆಬನಾನ್ ಸರಕಾರ ಇದನ್ನು ಖಚಿತ ಪಡಿಸಿಲ್ಲ. ಲೆಬನಾನ್ ಸರ್ಕಾರದ ಅಧಿಕಾರಿಗಳು ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಸ್ಪೋಟದ ಬಗ್ಗೆ ಮಾಹಿತಿ ನೀಡಿದ್ದರೂ ಸ್ಪೋಟಕ್ಕೆ ಕಾರಣ ತಿಳಿಸಿಲ್ಲ.
ಸ್ಪೋಟದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯದಲ್ಲಿ ಸ್ಪೋಟ ಸಂಭವಿಸಿದ ತಕ್ಷಣ ಕಿತ್ತಳೆ ಬಣ್ಣದಲ್ಲಿ ಗೋಪುರ ಆಕಾರದಲ್ಲಿ ಹೊಗೆ ಆಕಾಶದ ಎತ್ತರಕ್ಕೆ ಹಾರಿದೆ. ಅಲ್ಲದೆ, ಶಬ್ಧದ ತೀವ್ರತೆ ದೊಡ್ಡ ತರಂಗಗಳನ್ನು ಸೃಷ್ಟಿಸಿದೆ. ಪರಿಣಾಮ ಬಂದರು ಪ್ರದೇಶದಲ್ಲಿದ್ದ ಗೋದಾಮುಗಳು ಕಿಟಕಿ ಗಾಜುಗಳು ಮತ್ತು ಬಾಗಿಲುಗಳು ಹಾನಿಗೊಳಗಾಗಿವೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am