ಬ್ರೇಕಿಂಗ್ ನ್ಯೂಸ್
25-02-23 07:19 pm HK News Desk ದೇಶ - ವಿದೇಶ
ತಿರುವಂತಪುರ, ಫೆ.25: ಕೇರಳ ಮೂಲದ ಪ್ರಖ್ಯಾತ ಜುವೆಲ್ಲರಿ ಸಮೂಹ ಸಂಸ್ಥೆ ಜೋಯಲುಕ್ಕಾಸ್ ಕಚೇರಿ, ಮಳಿಗೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಕಳೆದೆರಡು ದಿನಗಳಲ್ಲಿ ಬರೋಬ್ಬರಿ 305 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.
ಜೋಯ್ ಆಲುಕ್ಕಾಸ್ ಕಂಪನಿಯ ಪ್ರಧಾನ ಕಚೇರಿ ಇರುವ ತ್ರಿಶ್ಶೂರಿನಲ್ಲಿ ಜುವೆಲ್ಲರಿ ಮತ್ತು ಕಂಪನಿ ಮಾಲೀಕ ವರ್ಗೀಸ್ ಮನೆ ಮತ್ತು ಕಚೇರಿಯಲ್ಲಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ. ಫಾರಿನ್ ಎಕ್ಸ್ ಚೇಂಜ್ ಮ್ಯಾನೇಜ್ಮೆಂಟ್ ಆಕ್ಟ್ (ಫೆಮಾ) ಉಲ್ಲಂಘನೆ ಆಗಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಆಲುಕ್ಕಾಸ್ ಜುವೆಲ್ಲರಿ ಸಮೂಹದಿಂದ ಅನಧಿಕೃತ ಹಣದ ವಹಿವಾಟು ನಡೆದಿರುವ ಶಂಕೆಯಿದೆ. ಕೇರಳ, ಕರ್ನಾಟಕ, ತಮಿಳುನಾಡು ಸೇರಿ ದೇಶದ ಹಲವೆಡೆ 100ಕ್ಕೂ ಹೆಚ್ಚು ಜುವೆಲ್ಲರಿ ಮಳಿಗೆಗಳನ್ನು ಹೊಂದಿರುವ ಜೋಯ್ ಆಲುಕ್ಸಾಸ್ ಸಮೂಹವು ದುಬೈನಲ್ಲಿಯೂ ಮಳಿಗೆಗಳನ್ನು ಸ್ಥಾಪಿಸುತ್ತಿದೆ.
ಎರಡು ದಿನಗಳಲ್ಲಿ ತ್ರಿಶ್ಶೂರ್ ನಗರದ ಶೋಭಾ ಸಿಟಿಯಲ್ಲಿರುವ ಭೂಮಿ ಮತ್ತು ರೆಸಿಡೆನ್ಸಿ ಬಿಲ್ಡಿಂಗ್ ಸೇರಿ 33 ಕಡೆಯ ಸ್ಥಿರಾಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. 91.22 ಲಕ್ಷ ರೂಪಾಯಿ ಇದ್ದ ಮೂರು ಬ್ಯಾಂಕ್ ಖಾತೆಗಳು, 5.58 ಕೋಟಿಯಿದ್ದ ಮೂರು ಫಿಕ್ಸೆಡ್ ಡಿಪಾಸಿಟ್, ಜೋಯಲುಕ್ಕಾಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿರುವ 217.81 ಕೋಟಿ ಮೌಲ್ಯದ ಶೇರುಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಲ್ಲಿ ಜುವೆಲ್ಲರಿ ಮಳಿಗೆ ಸ್ಥಾಪಿಸಲು ಜೋಯಲುಕ್ಕಾಸ್ ಗ್ರೂಪ್ ನಿಂದ ಹವಾಲಾ ಮೂಲಕ ವಿದೇಶಕ್ಕೆ ಹಣದ ರವಾನೆ ಆಗಿದೆ ಎನ್ನುವ ಮಾಹಿತಿಯಡಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಜೋಯಲುಕ್ಕಾಸ್ ಷೇರು ಮಾರುಕಟ್ಟೆಯಿಂದ ದಿಢೀರ್ ಆಗಿ 2300 ಕೋಟಿ ಮೊತ್ತವನ್ನು ಐಪಿಓ ಮೂಲಕ ಹಿಂಪಡೆದಿದ್ದು, ಅಚ್ಚರಿಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇಡಿಯಿಂದ ತನಿಖೆ ಶುರುವಾಗಿತ್ತು. ಭಾರತದಲ್ಲಿ 68 ನಗರಗಳಲ್ಲಿ ಜೋಯಲುಕ್ಕಾಸ್ ಚಿನ್ನಾಭರಣ ಮಳಿಗೆಯಿದ್ದು, ದೇಶದ ಅತಿ ದೊಡ್ಡ ಜುವೆಲ್ಲರಿ ಸಮೂಹ ಸಂಸ್ಥೆಗಳಲ್ಲಿ ಒಂದಾಗಿದೆ.
The Enforcement Directorate on Friday said it has attached assets worth more than ₹305 crore of Joy Alukkas Verghese, the owner of prominent Kerala-based jewellery group Joyalukkas, in a FEMA case linked to alleged transfer of "huge cash" to Dubai by the company through hawala channels.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm