ಬ್ರೇಕಿಂಗ್ ನ್ಯೂಸ್
27-02-23 03:20 pm HK News Desk ದೇಶ - ವಿದೇಶ
ಹೈದರಾಬಾದ್, ಫೆ.27: ರಾಗಿಂಗ್ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ವಾರಂಗಲ್ ಜಿಲ್ಲೆಯಲ್ಲಿ ನಡೆದಿದೆ.
ಕಾಕತೀಯ ವೈದ್ಯಕೀಯ ಕಾಲೇಜಿನ(ಕೆಎಂಸಿ) ಅನಸ್ತೇಶಿಯಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಅಧ್ಯಯನ ಮಾಡುತ್ತಿದ್ದ ಪ್ರೀತಿ ಎಂಬಾಕೆ ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆಗೆ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಮೊಹಮ್ಮದ್ ಆಲಿ ಸೈಫ್ ಎಂಬಾತ ಹಲವು ಸಮಯದಿಂದ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತು ನಾಲ್ಕು ದಿನಗಳ ಹಿಂದೆ ಯುವತಿ ಇಂಜೆಕ್ಷನ್ ತೆಗೆದುಕೊಂಡಿದ್ದು ಬಳಿಕ ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಬಳಿಕ ಆಕೆಯನ್ನು ಹೈದರಾಬಾದ್ ಎಂಜಿಎಂ ಆಸ್ಪತ್ರೆಗೆ ಕರೆತರಲಾಗಿತ್ತು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಪ್ರೀತಿ ಬುಡಕಟ್ಟು ಜನಾಂಗಕ್ಕೆ ಸೇರಿದ ವಿದ್ಯಾರ್ಥಿನಿಯಾಗಿದ್ದು ಕುಟುಂಬಸ್ಥರು, ಬುಡಕಟ್ಟು ಜನಾಂಗದ ಸಂಘಟನೆಗಳ ಕಾರ್ಯಕರ್ತರು ಕಾಕತೀಯ ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಸೈಫ್ ವಿರುದ್ಧ ರಾಗಿಂಗ್, ಆತ್ಮಹತ್ಯೆಗೆ ಪ್ರಚೋದನೆ ಮತ್ತು ಎಸ್ಟಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದೇ ವೇಳೆ, ಪ್ರೀತಿ ತಂದೆ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು ಆರೋಪಿ ವಿರುದ್ಧ ಈ ಹಿಂದೆಯೇ ಆಸ್ಪತ್ರೆ ಆಡಳಿತಕ್ಕೆ ದೂರು ನೀಡಲಾಗಿತ್ತು. ಆದರೆ ಏಕ್ಷನ್ ತೆಗೆದುಕೊಂಡಿರಲಿಲ್ಲ ಎಂದಿದ್ದಾರೆ.
ಭಾನುವಾರ ಸಂಜೆಯೇ ಹಲವಾರು ಸಂಘಟನೆಗಳು ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದು ನ್ಯಾಯಕ್ಕಾಗಿ ಆಗ್ರಹ ಮಾಡಿವೆ.
A first-year postgraduate medical student died in Hyderabad on Sunday night, four days after she allegedly attempted suicide. 26-year-old D Preethi attempted suicide allegedly by a self-administered injections after being harassed by her senior at Kakatiya Medical College, police said.
04-03-26 05:06 pm
HK News Staffer
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
04-03-26 12:58 pm
HK News Staffer
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm