ಬ್ರೇಕಿಂಗ್ ನ್ಯೂಸ್
22-10-20 05:34 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 22: ಇತ್ತೀಚೆಗೆ ಉದ್ದ ಗಡ್ಡ ಬಿಡುವುದು ಯುವಕರಲ್ಲಿ ಫ್ಯಾಷನ್ ಆಗಿಬಿಟ್ಟಿದೆ. ಆದ್ರೆ, ಉತ್ತರ ಪ್ರದೇಶದ ಭಾಗ್ಪಾತ್ ಎಂಬಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರು ಉದ್ದದ ಗಡ್ಡ ಬಿಟ್ಟು ಕೆಲಸ ಕಳೆದುಕೊಂಡಿದ್ದಾರೆ.
ಪೊಲೀಸ್ ಇಲಾಖೆಯ ನಿಯಮವನ್ನ ಮೀರಿ ಗಡ್ಡ ಬೆಳೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇಂತೆಸಾರ್ ಅಲಿ ಅವರನ್ನ ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಗಡ್ಡ ಬಿಟ್ಟುಕೊಂಡಿದ್ದಕ್ಕೆ ಹಲವು ಬಾರಿ ಹಿರಿಯ ಅಧಿಕಾರಿಗಳು ಇಂತೆಸಾರ್ ಆಲಿಗೆ ಎಚ್ಚರಿಕೆ ನೀಡಿದ್ದರು. ಕ್ಷೌರ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರೂ, ಇಲಾಖೆಯಿಂದ ಅನುಮತಿ ಪಡೆಯಲು ಅರ್ಜಿ ಬರೆದಿದ್ದರು. ಹಿರಿಯಧಿಕಾರಿಗಳ ಸಲಹೆಯನ್ನು ಕೇರ್ ಮಾಡದ ಸಬ್ ಇನ್ಸ್ ಪೆಕ್ಟರ್ ತಮ್ಮ ಪಾಡಿಗೆ ತಾವು ಗಡ್ಡವನ್ನ ಬೆಳೆಸುತ್ತಲೇ ಇದ್ದರು. ಪ್ರಶ್ನೆ ಮಾಡಿದವರನ್ನು ಸಿಖ್ ಸಮುದಾಯಕ್ಕೆ ಬಿಡೋದಿಲ್ಲವೇ ಎಂದು ಹೇಳುತ್ತಿದ್ದರಂತೆ. ಇದರಿಂದ ಇಲಾಖೆ ನಿಯಮ ಉಲ್ಲಂಘಿಸಿದ ಕಾರಣ ನೀಡಿ ಆಲಿ ಅವರನ್ನ ಅಮಾನತು ಮಾಡಲಾಗಿದೆ. ನಾನು 25 ವರ್ಷಗಳಿಂದ ಇಲಾಖೆಯಲ್ಲಿ ಸೇವೆಯಲ್ಲಿದ್ದೇನೆ. ಈ ಸಮಸ್ಯೆ ಬಂದಿರಲಿಲ್ಲ. ಈಗ ಅಮಾನತು ಮಾಡಿದ್ದಾರೆ ಎಂದು ಅಲಿ ಪ್ರತಿಕ್ರಿಯಿಸಿದ್ದಾರೆ.
ಪೊಲೀಸ್ ಇಲಾಖೆಯ ನಿಯಮ ಪ್ರಕಾರ ಸಿಖ್ ಸಮುದಾದವರಿಗೆ ಮಾತ್ರ ಗಡ್ಡವನ್ನ ಇಟ್ಟುಕೊಳ್ಳಲು ಅವಕಾಶವಿದೆ. ಆದರೆ ಉಳಿದ ಎಲ್ಲ ಸಮುದಾಯದ ಪೊಲೀಸರು ಸ್ವಚ್ಛವಾಗಿ ಸಂಪೂರ್ಣ ಶೇವ್ ಮಾಡಿಕೊಳ್ಳುವುದು ಕಡ್ಡಾಯ.
Sub-inspector in Uttar Pradesh Police, Intesa Ali, has been suspended and sent to the police lines, and all this for keeping a beard without permission.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm