ಬ್ರೇಕಿಂಗ್ ನ್ಯೂಸ್
09-03-23 10:46 pm HK News Desk ದೇಶ - ವಿದೇಶ
ತಿರುವನಂತಪುರಂ, ಮಾ.9 : ಆ ದಂಪತಿಗೆ ಹಿಂದೆ ಮದುವೆಯಾಗಿದ್ದು ಮೂವರು ಹೆಣ್ಮಕ್ಕಳನ್ನು ಹೊಂದಿದ್ದಾರೆ. ಆದರೆ ಮುಸ್ಲಿಂ ಹೆಣ್ಮಕ್ಕಳಿಗೆ ಹೆತ್ತವರ ಆಸ್ತಿ ಪಡೆಯುವಲ್ಲಿ ತೊಡಕಿದೆ ಎನ್ನುವುದನ್ನು ಮನಗಂಡ ಆ ದಂಪತಿ ತಮ್ಮ ಹಳೆಯ ಮದುವೆಯನ್ನೇ ರದ್ದುಪಡಿಸಿ ವಿಶೇಷ ವಿವಾಹ ಕಾಯಿದೆಯಲ್ಲಿ ಹೊಸತಾಗಿ ಮದುವೆಯಾಗಿದ್ದಾರೆ.
ಕೇರಳದ ಕಾಞಂಗಾಡ್ ಮೂಲದ ಖ್ಯಾತ ವಕೀಲ ಸಿ. ಶುಕ್ಕೂರ್ ಮತ್ತು ಮಹಾತ್ಮ ಗಾಂಧಿ ವಿವಿಯ ಮಾಜಿ ಉಪ ಕುಲಪತಿ ಡಾ. ಶೀನಾ ಅವರು ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾರ್ಚ್ 8ರಂದು ಮರು ಮದುವೆಯಾಗಿದ್ದಾರೆ. ಇಳಿ ವಯಸ್ಸಿನಲ್ಲಿ ಇವರ ಮರು ಮದುವೆ ಮುಸ್ಲಿಮರ ಅಂಧ ಕಟ್ಟುಪಾಡುಗಳ ಬಗ್ಗೆ ಮರು ಚಿಂತಿಸುವಂತೆ ಮಾಡಿದೆ.

ಅಕ್ಟೋಬರ್ 6, 1994 ರಂದು ಷರಿಯಾ ಕಾನೂನಿನಡಿ ಇವರು ಮದುವೆಯಾಗಿದ್ದರು. ಈಗ ವಿಶೇಷ ವಿವಾಹ ಕಾಯಿದೆಯಡಿ ಮರು ಮದುವೆ ಮಾಡಿಕೊಂಡಿದ್ದು ಆಮೂಲಕ ತಮ್ಮ ಮೂವರು ಹೆಣ್ಮಕ್ಕಳಿಗೆ ಸಂಪೂರ್ಣ ಆಸ್ತಿ ಹಕ್ಕನ್ನು ದಯಪಾಲಿಸಿದ್ದಾರೆ. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ, ಹೆಣ್ಣು ಮಕ್ಕಳು ತಂದೆಯ ಆಸ್ತಿಯಲ್ಲಿ ಮೂರನೇ ಎರಡರಷ್ಟು ಭಾಗವನ್ನು ಮಾತ್ರ ಪಡೆಯುತ್ತಾರೆ, ಉಳಿದವು ಯಾರೂ ಇಲ್ಲದಿದ್ದರೆ ತಂದೆಯ ಸಹೋದರರಿಗೆ ಹೋಗುತ್ತದೆ. ಹೀಗಾಗಿ ದಂಪತಿ ಆಯ್ಕೆ ಮಾಡಿಕೊಂಡಿದ್ದು ಮರು ಮದುವೆಯನ್ನು.
ನಮಗೆ ಪುರುಷ ಸಂತತಿ ಇಲ್ಲದಿರುವುದರಿಂದ ಆಸ್ತಿ ಸೋದರರಿಗೆ ಹೋಗುತ್ತದೆ. ಇದು ಮಹಿಳೆಯರ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಮತ್ತು ತಾರತಮ್ಯವಾಗಿದೆ, ಮುಸ್ಲಿ ಧರ್ಮದಲ್ಲಿ ಹೆಣ್ಣು ಮಕ್ಕಳಿಗೆ ಸಮಾನತೆಯ ಹಕ್ಕನ್ನು ನಿರಾಕರಿಸಿರುವುದು ವಿಷಾದನೀಯ ಎಂದು ಶುಕೂರ್ ಹೇಳುತ್ತಾರೆ.
ಸಂವಿಧಾನದ ಸೆಕ್ಷನ್ 14 ರ ಪ್ರಕಾರ, ಧರ್ಮ, ಜಾತಿ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲರಿಗೂ ಸಮಾನ ಹಕ್ಕುಗಳಿವೆ. ಮುಸ್ಲಿಮರ ಹೆಣ್ಣುಮಕ್ಕಳಿಗೆ ಮಾತ್ರ ಈ ಹಕ್ಕನ್ನು ನಿರಾಕರಿಸಿರುವುದು ಅತ್ಯಂತ ವಿಷಾದನೀಯ. ನಾನು ಎರಡು ಬಾರಿ ಅಪಘಾತಗಳನ್ನು ಎದುರಿಸಿದ್ದೇನೆ, ಅದರಿಂದ ಸ್ವಲ್ಪದರಲ್ಲಿಯೇ ಪಾರಾಗಿದ್ದೇನೆ. ನಾನು ಜಗತ್ತನ್ನು ತೊರೆದ ನಂತರ ಏನಾಗುತ್ತದೆ ಎಂಬ ಚಿಂತನೆ ನನ್ನನ್ನು ಯೋಚಿಸುವಂತೆ ಮಾಡಿತು. ನನ್ನ ಹೆಣ್ಣು ಮಕ್ಕಳು ನನ್ನ ಆಸ್ತಿಯ ಏಕೈಕ ವಾರಸುದಾರರಾಗಬೇಕೆಂದು ನಾನು ಬಯಸುತ್ತೇನೆ ಎನ್ನುತ್ತಾರೆ.
The remarriage of advocate and actor C Shukkur and his wife Sheena, the former Pro Vice Chancellor of Mahatma Gandhi University under the Special Marriage Act, 29 years after they got married led to a storm on social media. The duo got married on Wednesday and took their vows again. But the purpose is what has been drawing the criticism. Their remarriage is to ensure their daughter's 'financial security', which is not permitted in Muslim law. Their three daughters were also present at the remarriage event.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm