ಬ್ರೇಕಿಂಗ್ ನ್ಯೂಸ್
29-03-23 04:06 pm HK News Desk ದೇಶ - ವಿದೇಶ
ಮುಂಬೈ, ಮಾ.29: ಭೂಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ನಾಗಪುರ ಪೊಲೀಸರು ಬಂಧಿಸಿದ್ದು, ವಿಮಾನದ ಮೂಲಕ ನಾಗಪುರಕ್ಕೆ ಕೊಂಡೊಯ್ದಿದ್ದಾರೆ.
ಮಾ.21ರಂದು ನಾಗಪುರದ ನಿತಿನ್ ಗಡ್ಕರಿಯವರ ಕಚೇರಿಗೆ ಫೋನಾಯಿಸಿ ಹತ್ತು ಕೋಟಿ ರೂಪಾಯಿ ಬೇಡಿಕೆ ಇರಿಸಿದ್ದ. ಫೋನ್ ಮಾಡಿದ್ದ ವ್ಯಕ್ತಿ ತನ್ನನ್ನು ಜಯೇಶ್ ಪೂಜಾರಿ ಎಂದು ಹೇಳಿಕೊಂಡಿದ್ದ. ಈ ಬಗ್ಗೆ ಕಚೇರಿ ಉದ್ಯೋಗಿಯ ದೂರಿನಂತೆ ಎಫ್ಐಆರ್ ದಾಖಲಾಗಿತ್ತು.
ಕಳೆದ ಜನವರಿ 14ರಂದು ಇದೇ ರೀತಿ ಜಯೇಶ್ ಪೂಜಾರಿ ಹೆಸರಲ್ಲಿ ನೂರು ಕೋಟಿ ಬೇಡಿಕೆ ಇರಿಸಿ ನಾಗಪುರದ ಸಚಿವರ ಕಚೇರಿಗೆ ಫೋನ್ ಮಾಡಿ ಬೆದರಿಕೆ ಒಡ್ಡಲಾಗಿತ್ತು. ಆ ಸಂದರ್ಭದಲ್ಲಿ ಬೆಳಗಾವಿ ಜೈಲಿನಿಂದಲೇ ಫೋನ್ ಬಂದಿರುವುದನ್ನು ಪತ್ತೆ ಮಾಡಿ ಪೊಲೀಸರು ಜಯೇಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ತಾನು ಕರೆ ಮಾಡಿದ್ದಲ್ಲ ಎಂದು ಹೇಳಿಕೆ ನೀಡಿದ್ದರಿಂದ ಪೊಲೀಸರು ಬಿಟ್ಟು ಕಳುಹಿಸಿದ್ದರು.
ಆದರೆ ಇದೀಗ ಮತ್ತೆ ಅದೇ ರೀತಿಯ ಫೋನ್ ಕರೆ ಬಂದಿದ್ದು, ಹತ್ತು ಕೋಟಿ ನೀಡದಿದ್ದರೆ ಸಚಿವರ ಜೀವಕ್ಕೆ ಅಪಾಯ ಇದೆಯೆಂದು ಹೇಳಿದ್ದ. ನಾಗಪುರ ಪೊಲೀಸರು ಅಲರ್ಟ್ ಆಗಿದ್ದು, ಈ ಬಾರಿ ನೇರವಾಗಿ ಆರೋಪಿ ಜಯೇಶ್ ಪೂಜಾರಿಯನ್ನ ಹೊತ್ತೊಯ್ದಿದ್ದಾರೆ. ಜಯೇಶ್ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದವನಾಗಿದ್ದು ಪ್ರಕರಣ ಒಂದರಲ್ಲಿ ಶಿಕ್ಷೆ ವಿಧಿಸಲ್ಪಟ್ಟು ಜೈಲು ಪಾಲಾಗಿದ್ದ.
Threat calls to Nitin Gadkari on Jayesh Pujari taken into custody from the Hindalga jail by nagpur police. Nagpur Police on Tuesday took into custody a murder case convict from a jail in Belagavi in Karnataka in connection with the threat calls made to the office of Union minister Nitin Gadkari on two occasions, an official said.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm