ಬ್ರೇಕಿಂಗ್ ನ್ಯೂಸ್
02-04-23 01:04 pm HK News Desk ದೇಶ - ವಿದೇಶ
ವಾಷಿಂಗ್ಟನ್, ಎ.2: ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.
ಈ ದುರ್ಘಟನೆ ನಡೆಯುವ ಸಂದರ್ಭದಲ್ಲಿ ಇಲಿನಾಯ್ಸ್ನಲ್ಲಿ ತುಂಬಿದ ಸಂಗೀತ ಕಚೇರಿ ನಡೆಯುತ್ತಿತ್ತು. ಆಗ ಕಟ್ಟಡದ ಮೇಲ್ಛಾವಣಿಯು ಕುಸಿದುಬಿದ್ದಿದೆ, ಜನರು ಭಯಭೀತರಾದರು.
ಕನಿಷ್ಠ ಎಂಟು ರಾಜ್ಯಗಳಲ್ಲಿ ಸುಂಟರಗಾಳಿ ಬೀಸಿದ್ದು ಮನೆಗಳು ಮತ್ತು ಅನೇಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾನಿಗೀಡಾಗಿವೆ. ಮೃತಪಟ್ಟವರಲ್ಲಿ ಟೆನ್ನೆಸ್ಸೀ ಕೌಂಟಿಯ ಏಳು ಮಂದಿ ಸೇರಿದ್ದಾರೆ. ಅರ್ಕಾನ್ಸಾಸ್ನ ಸಣ್ಣ ಪಟ್ಟಣವಾದ ವೈನೆಯಲ್ಲಿ ನಾಲ್ವರು, ಇಂಡಿಯಾನಾದ ಸುಲ್ಲಿವಾನ್ನಲ್ಲಿ ಮೂವರು ಮತ್ತು ಇಲಿನಾಯ್ಸ್ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.


ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಅಪ್ಪಳಿಸಿದ ಬಿರುಗಾಳಿಗಳಿಂದ ಅಲಬಾಮಾ ಮತ್ತು ಮಿಸ್ಸಿಸ್ಸಿಪ್ಪಿಯಲ್ಲಿ ಕೂಡ ಜನರು ಸಾವಿಗೀಡಾಗಿದ್ದಾರೆ.
ಮೆಂಫಿಸ್ನ ಪಶ್ಚಿಮಕ್ಕೆ 50 ಮೈಲುಗಳು ದೂರದಲ್ಲಿ 8,000 ಜನರ ಸಮುದಾಯವಾದ ಟೆನ್ನೆಸ್ಸೀಯ ವೈನ್ನ ನಿವಾಸಿಗಳು, ಹೈಸ್ಕೂಲ್ನ ಮೇಲ್ಛಾವಣಿ ಚೂರುಚೂರು ಆಗಿವೆ, ಕಟ್ಟಡದ ಕಿಟಕಿಗಳು ಹಾರಿಹೋಗಿವೆ. ಬೃಹತ್ ಮರಗಳು ಧರೆಗುರುಳಿವೆ. ಮುರಿದು ಬಿದ್ದ ಗೋಡೆಗಳು, ಕಿಟಕಿಗಳು ಮತ್ತು ಛಾವಣಿಗಳು ಮನೆಗಳ ಅವಶೇಷಗಳನ್ನು ನೋಡಬಹುದಾಗಿದೆ.


ಇಂಡಿಯಾನಾ, ಇಲಿನಾಯ್ಸ್, ಅರ್ಕಾನ್ಸಾಸ್ ಮತ್ತು ಟೆನ್ನೆಸ್ಸೀಯಲ್ಲಿ ಸುಮಾರು 4,50,000 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ವ್ಯಾಪಾರ, ವ್ಯವಹಾರಕ್ಕೆ ತೊಂದರೆಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಅಲಬಾಮಾ ಮತ್ತು ಜಾರ್ಜಿಯಾದ ಭಾಗಗಳಿಗೆ ಸಹ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.
At least 21 people have been killed after a series of tornadoes tore through towns and cities in the United States' South and Midwest. Homes were destroyed and thousands left without power after storms caused devastation across several states. According to Washington Post, more than 60 tornado reports have been recorded.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm