ಬ್ರೇಕಿಂಗ್ ನ್ಯೂಸ್
02-04-23 01:04 pm HK News Desk ದೇಶ - ವಿದೇಶ
ವಾಷಿಂಗ್ಟನ್, ಎ.2: ತೀವ್ರ ಸುಂಟರಗಾಳಿ ಸಹಿತ ಬೀಸಿದ ಬಿರುಗಾಳಿಯಿಂದ ದಕ್ಷಿಣ ಮತ್ತು ಮಿಡ್ವೆಸ್ಟ್ ನ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಅರ್ಕಾನ್ಸಾಸ್ ರಾಜಧಾನಿಯ ಅನೇಕ ಪ್ರದೇಶಗಳು ಹಾನಿಗೀಡಾದ ದುರ್ಘಟನೆ ನಡೆದಿದೆ.
ಈ ದುರ್ಘಟನೆ ನಡೆಯುವ ಸಂದರ್ಭದಲ್ಲಿ ಇಲಿನಾಯ್ಸ್ನಲ್ಲಿ ತುಂಬಿದ ಸಂಗೀತ ಕಚೇರಿ ನಡೆಯುತ್ತಿತ್ತು. ಆಗ ಕಟ್ಟಡದ ಮೇಲ್ಛಾವಣಿಯು ಕುಸಿದುಬಿದ್ದಿದೆ, ಜನರು ಭಯಭೀತರಾದರು.
ಕನಿಷ್ಠ ಎಂಟು ರಾಜ್ಯಗಳಲ್ಲಿ ಸುಂಟರಗಾಳಿ ಬೀಸಿದ್ದು ಮನೆಗಳು ಮತ್ತು ಅನೇಕ ಕಟ್ಟಡಗಳು, ವಾಣಿಜ್ಯ ಸಂಕೀರ್ಣಗಳು ಹಾನಿಗೀಡಾಗಿವೆ. ಮೃತಪಟ್ಟವರಲ್ಲಿ ಟೆನ್ನೆಸ್ಸೀ ಕೌಂಟಿಯ ಏಳು ಮಂದಿ ಸೇರಿದ್ದಾರೆ. ಅರ್ಕಾನ್ಸಾಸ್ನ ಸಣ್ಣ ಪಟ್ಟಣವಾದ ವೈನೆಯಲ್ಲಿ ನಾಲ್ವರು, ಇಂಡಿಯಾನಾದ ಸುಲ್ಲಿವಾನ್ನಲ್ಲಿ ಮೂವರು ಮತ್ತು ಇಲಿನಾಯ್ಸ್ನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಅಪ್ಪಳಿಸಿದ ಬಿರುಗಾಳಿಗಳಿಂದ ಅಲಬಾಮಾ ಮತ್ತು ಮಿಸ್ಸಿಸ್ಸಿಪ್ಪಿಯಲ್ಲಿ ಕೂಡ ಜನರು ಸಾವಿಗೀಡಾಗಿದ್ದಾರೆ.
ಮೆಂಫಿಸ್ನ ಪಶ್ಚಿಮಕ್ಕೆ 50 ಮೈಲುಗಳು ದೂರದಲ್ಲಿ 8,000 ಜನರ ಸಮುದಾಯವಾದ ಟೆನ್ನೆಸ್ಸೀಯ ವೈನ್ನ ನಿವಾಸಿಗಳು, ಹೈಸ್ಕೂಲ್ನ ಮೇಲ್ಛಾವಣಿ ಚೂರುಚೂರು ಆಗಿವೆ, ಕಟ್ಟಡದ ಕಿಟಕಿಗಳು ಹಾರಿಹೋಗಿವೆ. ಬೃಹತ್ ಮರಗಳು ಧರೆಗುರುಳಿವೆ. ಮುರಿದು ಬಿದ್ದ ಗೋಡೆಗಳು, ಕಿಟಕಿಗಳು ಮತ್ತು ಛಾವಣಿಗಳು ಮನೆಗಳ ಅವಶೇಷಗಳನ್ನು ನೋಡಬಹುದಾಗಿದೆ.
ಇಂಡಿಯಾನಾ, ಇಲಿನಾಯ್ಸ್, ಅರ್ಕಾನ್ಸಾಸ್ ಮತ್ತು ಟೆನ್ನೆಸ್ಸೀಯಲ್ಲಿ ಸುಮಾರು 4,50,000 ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ವ್ಯಾಪಾರ, ವ್ಯವಹಾರಕ್ಕೆ ತೊಂದರೆಯುಂಟಾಗಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ಅಲಬಾಮಾ ಮತ್ತು ಜಾರ್ಜಿಯಾದ ಭಾಗಗಳಿಗೆ ಸಹ ಎಚ್ಚರಿಕೆ ನೀಡಲಾಗಿದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.
At least 21 people have been killed after a series of tornadoes tore through towns and cities in the United States' South and Midwest. Homes were destroyed and thousands left without power after storms caused devastation across several states. According to Washington Post, more than 60 tornado reports have been recorded.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm