ಬ್ರೇಕಿಂಗ್ ನ್ಯೂಸ್
05-08-20 07:57 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.
ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.
ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.
ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.
ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿ ಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರು ಶಾಂತಿ ಮಂತ್ರ ಪಠಿಸಿದರು.
’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm