ಬ್ರೇಕಿಂಗ್ ನ್ಯೂಸ್
05-08-20 07:57 am Headline Karnataka News Network ದೇಶ - ವಿದೇಶ
ಲಕ್ನೋ, ಆಗಸ್ಟ್ 05: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು.
ಶ್ರಾವಣ ಮಾಸ, ಕೃಷ್ಣ ಪಕ್ಷ, ದ್ವಿತೀಯ ತಿಥಿ, ಅಭಿಜಿನ್ ಮುಹೂರ್ತ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಭೂಮಿಪೂಜೆ ನೆರವೇರಿತು.
ಶಿಲಾನ್ಯಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಟ್ಟು 22.6 ಕೆಜಿ ತೂಕದ ಐದು ಇಟ್ಟಿಗೆಗಳನ್ನು ಬಳಸಿದರು. ಇವುಗಳಿಗೆ ನಂದಾ, ಭದ್ರಾ, ಜಯಾ, ರಿಕ್ಷಾ, ಪೂರ್ಣಾ ಎಂದು ಹೆಸರು.
ಋತ್ವಿಜರಿಂದ ವೇದಮಂತ್ರ ಪಠಣ ಮತ್ತು ಭಕ್ತರಿಂದ ರಾಮಾಯಣ ಶ್ಲೋಕಗಳ ಪಠಣ ಸತತವಾಗಿ ನಡೆಯಿತು. ದೇಶದ ವಿವಿಧ ಭಾಗಗಳಲ್ಲಿ ಟಿವಿಗಳಲ್ಲಿ ಅಯೋಧ್ಯೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸುತ್ತಿದ್ದ ಜನರು ಕುಳಿತ ಸ್ಥಳದಿಂದಲೇ ’ಜೈಶ್ರೀರಾಮ್’ ಎಂದು ಜಯಕಾರ ಮೊಳಗಿಸಿದರು.
ಭೂಮಿಪೂಜೆಗೆ ಬಳಸುವ ಗುದ್ದಲಿಯನ್ನು ವಿಧಿಪೂರ್ವಕ ಪೂಜಿಸಲಾಯಿತು. ಈ ಸಂದರ್ಭ ಭಕ್ತರು ರಾಮರಕ್ಷಾಸ್ತೋತ್ರ ಪಠಿಸಿದರು. ಭೂಮಿಯನ್ನು ಲಕ್ಷ್ಮಿ (ಸಂಪತ್ತು) ಎಂದು ಗೌರವಿಸುವ ಶ್ರೀಸೂಕ್ತವನ್ನು ಋತ್ವಿಜರು ಪಠಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೈಮುಗಿದು ಕುಳಿತಿದ್ದರು.
ಭೂಮಿಯನ್ನು ಲಕ್ಷ್ಮಿ ಎಂದು ಗೌರವಿಸುವ ಶ್ರೀಸೂಕ್ತವನ್ನು ಸ್ವರಬದ್ಧವಾಗಿ ಋತ್ವಿಜರು ಪಠಿಸಿದರು. ಪ್ರಧಾನಿ ಭೂಮಿಗೆ ಆರತಿ ಮಾಡಿ, ನಮಸ್ಕರಿಸಿದರು. ಭೂಮಿಯಿಂದ ಮಣ್ಣು ತೆಗೆದು ಶಿರಕ್ಕೆ ಧರಿಸಿದರು. ಪಂಚಭೂತಗಳೂ ಮಂಗಳ ಉಂಟು ಮಾಡಲಿ ಎಂಬ ಪ್ರಾರ್ಥನೆಯೊಂದಿಗೆ ಋತ್ವಿಜರು ಶಾಂತಿ ಮಂತ್ರ ಪಠಿಸಿದರು.
’ಕಾಲಕ್ಕೆ ಸರಿಯಾಗಿ ಮಳೆ ಬರಲಿ, ಸಸ್ಯ ಸಂಪತ್ತು ವೃದ್ಧಿಯಾಗಲಿ...’ ಋತ್ವಿಜರು ಆಶೀರ್ವಾದ ಮಂತ್ರ ಪಠಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm