ಬ್ರೇಕಿಂಗ್ ನ್ಯೂಸ್
10-04-23 06:53 pm HK News Desk ದೇಶ - ವಿದೇಶ
ನವದೆಹಲಿ, ಎ.10 : ಬಾಲಕನ ತುಟಿಗೆ ಮುತ್ತು ಕೊಡುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೌದ್ಧ ಧರ್ಮಗುರು ದಲೈಲಾಮಾ, ಬಾಲಕ ಮತ್ತು ಆತನ ಕುಟುಂಬಕ್ಕೆ ಕ್ಷಮೆ ಯಾಚಿಸಿದ್ದಾರೆ. ಅಲ್ಲದೇ, ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಹಾಗೂ ತಮಾಷೆ ರೀತಿಯಲ್ಲಿ ಕೀಟಲೆ ಮಾಡುತ್ತಾರೆ ಎಂದು ದಲೈಲಾಮಾ ಅವರ ತಂಡ ಹೇಳಿಕೆ ನೀಡಿದೆ.
ಕ್ಷಮೆ ಯಾಚನೆಯ ಟಿಪ್ಪಣಿಯನ್ನು ದಲೈಲಾಮಾ ತನ್ನ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಕ್ಷಮಾಪಣೆ ಟಿಪ್ಪಣಿಯನ್ನು ದಲೈಲಾಮಾ ಪರವಾದ ತಂಡ ಬರೆದುಕೊಂಡಿದ್ದು, ದಲೈಲಾಮಾ ವರ್ತನೆಯಿಂದ ನೋವಾಗಿದ್ದರೆ ಆ ಬಾಲಕ ಹಾಗೂ ಅವರ ಕುಟುಂಬ ಮತ್ತು ವಿಶ್ವಾದ್ಯಂತ ಇರುವ ಸ್ನೇಹಿತರಲ್ಲಿ ಅವರು ಕ್ಷಮೆ ಯಾಚಿಸುತ್ತಾರೆ. ದಲೈಲಾಮಾ ಅವರು ತಮ್ಮನ್ನು ಭೇಟಿಯಾಗುವ ಜನರನ್ನು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ನೋಡುತ್ತಾರೆ. ಈ ಘಟನೆಯ ಬಗ್ಗೆ ಅವರು ವಿಷಾದ ವ್ಯಕ್ತಪಡಿಸುತ್ತಾರೆ ಎಂದು ಹೇಳಿದ್ದಾರೆ.

ವೈರಲ್ ಆದ ವಿಡಿಯೋದಲ್ಲಿ ದಲೈಲಾಮಾ ಬಾಲಕನ ತುಟಿಗಳಿಗೆ ಮುತ್ತಿಡುತ್ತಾ ಹಣೆ ಸ್ಪರ್ಶಿಸುತ್ತಿರುವ ದೃಶ್ಯ ಇತ್ತು. ಅಲ್ಲದೆ, ತಮ್ಮ ನಾಲಿಗೆಯನ್ನು ಹೊರಹಾಕಿ ನಾಲಿಗೆಯನ್ನು ನೆಕ್ಕುವಂತೆ ಹೇಳಿರುವ ದೃಶ್ಯಗಳು ಅದೇ ವಿಡಿಯೋದಲ್ಲಿವೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ದಲೈಲಾಮಾ ವಿರುದ್ಧ ಕಿಡಿಕಾರಿದ್ದರು.

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತರಾಗಿರುವ ದಲೈಲಾಮಾ ಈ ಹಿಂದೆ 2019ರಲ್ಲಿ ಇದೇ ರೀತಿಯ ವಿವಾದ ಸೃಷ್ಟಿಸಿಕೊಂಡಿದ್ದರು. ತಮ್ಮ ಉತ್ತರಾಧಿಕಾರಿ ಮಹಿಳೆಯಾಗಬೇಕಾದರೆ ಅವರು ನೋಡಲು ಆಕರ್ಷಕವಾಗಿರಬೇಕು ಎಂದು ಹೇಳಿದ್ದರು. ಅದು ವಿವಾದವಾದ ಬಳಿಕ ಕ್ಷಮೆ ಯಾಚಿಸಿದ್ದರು. ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ದಲೈಲಾಮಾ, ಮಹಿಳಾ ದಲೈಲಾಮಾ ಬರಬೇಕೆಂದರೆ ಅವಳು ಹೆಚ್ಚು ಆಕರ್ಷಕವಾಗಿರಬೇಕು ಎಂದು ಹೇಳಿದ್ದು ವಿವಾದಕ್ಕೆ ಒಳಗಾಗಿತ್ತು.
The Dalai Lama has apologised to a young boy after a video emerged online of the spiritual Tibetan Buddhist leader kissing him on the lips and asking him to suck his tongue. The disturbing video of the most senior spiritual figure in Tibetan Buddhism was recorded during an event in northern India's hillside city of Dharamshala back in February.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm