ಬ್ರೇಕಿಂಗ್ ನ್ಯೂಸ್
05-08-20 08:14 am Headline Karnataka News Network ದೇಶ - ವಿದೇಶ
ಅಯೋಧ್ಯೆ (ಜು.5): ‘ಎಲ್ಲರೂ ರಾಮರೇ, ಎಲ್ಲರಲ್ಲೂ ರಾಮನೇ ಇದ್ದಾನೆ. ರಾಮ ಮಂದಿರನವನ್ನು ಇಲ್ಲಿಯೇ ಕಟ್ಟೋಣ. ನಮ್ಮ ಹೃದಯಗಳನ್ನು ಅಯೋಧ್ಯೆ ಮಾಡಿಕೊಳ್ಳೋಣ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದರು.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಮಾತನಾಡಿದ ಅವರು, ‘ಧರ್ಮ ಎಲ್ಲರನ್ನೂ ಮೇಲ್ಮೆಗೆ ತರುತ್ತದೆ. ವಿಶ್ವಕ್ಕೇ ಭಾರತವು ಸುಖ ಶಾಂತಿ ತರಬಲ್ಲದು. ನಾವು ಅಯೋಧ್ಯೆಯಲ್ಲಿ ಮಂದಿರ ಕಟ್ಟಿ ಸುಮ್ಮನಾಗಬಾರದು. ಅದಕ್ಕೂ ಮೊದಲು ಮನಮಮಂದಿರ ಕಟ್ಟಬೇಕು’ ಎಂದು ಹೇಳಿದರು.
ಅತಿಆಸೆ, ವಿಪರೀತ ಸಿಟ್ಟು, ಜಿಪುಣತನದಂಥ ಸಮಾಜಕಂಟಕ ಸ್ವಭಾಗಳನ್ನು ದೂರವಿಡಲು ರಾಮನ ಆದರ್ಶಗಳಿಂದ ಸ್ಪೂರ್ತಿ ಪಡೆಯೋಣ ಎಂದು ಕರೆ ನೀಡಿದರು.
‘ಇದು ನನಗೆ ಅತ್ಯಂತ ಆನಂದದ ದಿನ. ಈ ಹಿಂದೆ ನಮ್ಮ ಸರಸಂಘಚಾಲಕರಾಗಿದ್ದ ಬಾಳಾಸಾಹೇಬ್ ದೇವರಸರು ‘ಈ ಕೆಲಸವನ್ನು ವರ್ಷಗಟ್ಟಲೆ ಮಾಡಬೇಕು’ ಎಂದು ಹೇಳಿದ್ದರು. ಅದೇ ರೀತಿ ನಾವು ನಡೆದುಕೊಂಡೆವು. ಸಾವಿರಾರು ಮಂದಿ ಈ ಕಾರ್ಯಕ್ಕಾಗಿ ಬಲಿದಾನ ಮಾಡಿದ್ದರು. ಅವರೆಲ್ಲರನ್ನೂ ನಾನು ನೆನಪಿಸಿಕೊಳ್ಳುತ್ತೇನೆ ಎಂದು ಭಾಗವತ್ ಹೇಳಿದರು.
ಅಡ್ವಾಣಿ ಅವರು ಈ ಕಾರ್ಯಕ್ರಮವನ್ನು ತಮ್ಮ ನಿವಾಸದಲ್ಲಿ ನೋಡುತ್ತಿರಬಹುದು. ಸಾಕಷ್ಟು ನಾಯಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ. ಕೊರೊನಾ ಕಾಲದಿಂದ ವಿಶ್ವ ಅಂತರ್ಮುಖಿಯಾಗಿದೆ. ಏನಾದರೂ ದಾರಿಯಿದೆಯೇ ಎಂದು ಎದುರು ನೋಡುತ್ತಿದೆ. ನಮಗೆ ವಿಶ್ವಾಸವಿದೆ. ರಾಮನ ಹಾದಿಯಲ್ಲಿ ಪರಿಹಾರವಿದೆ ಎಂದು ಅವರು ಹೇಳಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm