ಬ್ರೇಕಿಂಗ್ ನ್ಯೂಸ್
17-04-23 07:54 pm HK News Desk ದೇಶ - ವಿದೇಶ
ಚಂಡೀಗಢ, ಎ.17: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ಗುಂಡಿನ ದಾಳಿ ನಡೆಸಿ ನಾಲ್ವರು ಯೋಧರನ್ನು ಹತ್ಯೆ ಮಾಡಿರುವ ಆರೋಪದಲ್ಲಿ ಯೋಧರೊಬ್ಬರನ್ನು ಕದ್ದ ರೈಫಲ್ನೊಂದಿಗೆ ಬಂಧಿಸಲಾಗಿದೆ.
ಗನ್ನರ್ ದೇಸಾಯಿ ಮೋಹನ್ ಬಂಧಿತ ಯೋಧ. ಗುಂಡಿನ ದಾಳಿ ನಡೆದಿದ್ದ ಸ್ಥಳದಲ್ಲಿ ರೈಫಲ್ ಮತ್ತು ಕೊಡಲಿ ಹಿಡಿದಿದ್ದ ಇಬ್ಬರನ್ನು ನೋಡಿರುವುದಾಗಿ ಮೋಹನ್ ಈ ಹಿಂದೆ ಹೇಳಿಕೆ ನೀಡಿದ್ದರು.
ನಾಲ್ವರನ್ನು ತಾನೇ ಹತ್ಯೆ ಮಾಡಿರುವುದಾಗಿ ಮೋಹನ್ ತಪ್ಪೊಪ್ಪಿಕೊಂಡಿದ್ದಾರೆ’ ಎಂದು ಬಟಿಂಡಾದ ಪೊಲೀಸ್ ವರಿಷ್ಠಾಧಿಕಾರಿ ಗುಲ್ನೀತ್ ಸಿಂಗ್ ಖುರಾನ ತಿಳಿಸಿದ್ದಾರೆ.
ಕೃತ್ಯದ ಹಿಂದಿನ ಕಾರಣವನ್ನು ಬಹಿರಂಗಪಡಿಸಲಾಗದು. ಹತ್ಯೆಗೀಡಾಗಿರುವ ನಾಲ್ವರ ಯೋಧರೊಂದಿಗೆ ಮೋಹನ್ಗೆ ವೈಯಕ್ತಿಕ ದ್ವೇಷ ಇತ್ತು’ ಎಂದು ಹೇಳಿದ್ದಾರೆ.
ಗುಂಡಿನ ದಾಳಿ ನಡೆಯುವುದಕ್ಕೂ ಎರಡು ದಿನಗಳ ಮೊದಲು ಸೇನಾ ನೆಲೆಯಿಂದ ಇನ್ಸಾಸ್ ರೈಫಲ್ ಹಾಗೂ 28 ಸುತ್ತು ಮದ್ದುಗುಂಡುಗಳು ಕಾಣೆಯಾಗಿದ್ದವು. ಸೇನಾ ನೆಲೆಯಿಂದ ಕದ್ದ ರೈಫಲ್ ಮತ್ತು ಮದ್ದುಗುಂಡುಗಳಿಂದಲೇ ಈ ಕೃತ್ಯಕ್ಕೆ ಬಳಸಲಾಗಿದೆ ಎಂಬುದು ತನಿಖೆಯಿಂದ ತಿಳಿದು ಬಂದಿರುವುದಾಗಿ ಖುರಾನ ಅವರು ಹೇಳಿದ್ದಾರೆ.
ಪೊಲೀಸರು ವಿಚಾರಣೆ ನಡೆಸಿದ ಬಳಿಕ ಫಿರಂಗಿ ದಳದ ಗನ್ನರ್ ದೇಸಾಯಿ ಮೋಹನ್ ಅವರು ತಾನು ಇನ್ಸಾಸ್ ರೈಫಲ್ ಕದ್ದು, ನಾಲ್ವರು ಸಹೋದ್ಯೋಗಿಗಳನ್ನು ಹತ್ಯೆ ಮಾಡಿರುವುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಏಪ್ರಿಲ್ 9ರಂದು ಬೆಳಿಗ್ಗೆ ರೈಫಲ್ ಮತ್ತು ಮದ್ದುಗುಂಡುಗಳನ್ನು ಕದ್ದು, ಅಡಗಿಸಿಟ್ಟಿರುವುದಾಗಿ ಮೋಹನ್ ತಿಳಿಸಿದ್ದಾರೆ’ ಎಂದೂ ಹೇಳಿದೆ.
ಕೊಳಚೆ ಚರಂಡಿಯಲ್ಲಿ ಬಚ್ಚಿಟ್ಟಿದ್ದ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಲಾಗಿದೆ. ಪಂಜಾಬ್ ಪೊಲೀಸರು ನಡೆಸುತ್ತಿರುವ ತನಿಖೆಗೆ ಸಹಕಾರ ನೀಡಲಾಗುವುದು ಎಂದೂ ಹೇಳಿಕೆಯಲ್ಲಿ ತಿಳಿಸಿದೆ.
An Army jawan has been arrested for allegedly killing four soldiers at the Bathinda Military Station with a stolen assault rifle, an official said on Monday. Gunner Desai Mohan had earlier claimed that he saw two men with a rifle and an axe near the site of the firing at the military base in Punjab. Later, he confessed to the killings, Bathinda Senior Superintendent of Police Gulneet Singh Khurana said.
21-05-25 01:50 pm
Bangalore Correspondent
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
Darshan, Pavitra, Court case: ರೇಣುಕಾಸ್ವಾಮಿ ಹತ...
20-05-25 10:49 pm
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm