ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm