ಬ್ರೇಕಿಂಗ್ ನ್ಯೂಸ್
19-04-23 11:03 pm HK News Desk ದೇಶ - ವಿದೇಶ
ನವದೆಹಲಿ, ಎ.19 : ಐಎನ್ಎಸ್ ಮೀಡಿಯಾ ಲಂಚ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಸೇರಿದ್ದೆನ್ನಲಾದ, ಕೊಡಗು ಜಿಲ್ಲೆಯಲ್ಲಿರುವ 11.04 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.
ಈ ಕುರಿತು ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, “ಕೊಡಗಿನಲ್ಲಿ ಕಾರ್ತಿಯವರು ಒಟ್ಟು ನಾಲ್ಕು ಆಸ್ತಿಗಳನ್ನು ಹೊಂದಿದ್ದು ಅವುಗಳಲ್ಲಿ ಒಂದು ಸ್ಥಿರಾಸ್ತಿಯಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ನ್ಯಾಯಾಲಯದಿಂದ ಜಪ್ತಿ ಆದೇಶವನ್ನು ತಂದು ಈ ಕ್ರಮ ಕೈಗೊಳ್ಳಲಾಗಿದೆ’’ ಎಂದು ಹೇಳಿದೆ.
ಐಎನ್ ಎಕ್ಸ್ ಮೀಡಿಯಾ ಪಿ. ಚಿದಂಬರಂ ವಿರುದ್ಧ ಕೇಂದ್ರದಲ್ಲಿ ಸಚಿವರಾಗಿದ್ದಾಗ, ಐಎನ್ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ವತಿಯಿಂದ ಒಪ್ಪಿಗೆಯ ಪ್ರಮಾಣ ಪತ್ರ ಕೊಡಿಸಲು ಲಂಚ ಪಡೆದಿದ್ದರೆಂಬ ಆರೋಪಗಳು ಕೇಳಿಬಂದಿದ್ದವು. ಆ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ.ಯು, ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಸಂಸ್ಥೆಯಿಂದ ತಾವು ಕೋಟ್ಯಂತರ ರೂ. ಲಂಚವನ್ನು ನೇರವಾಗಿ ಪಡೆದಿಲ್ಲ. ಅದನ್ನು ಕಾರ್ತಿ ಚಿದಂಬರಂ ಅವರ ಹೆಸರಿನಲ್ಲಿ ಕೆಲವಾರು ನಕಲಿ ಕಂಪನಿಗಳನ್ನು ತೆರೆದು ಅವುಗಳಲ್ಲಿ ಹೂಡಿಕೆ ಮಾಡಿಸಲಾಗಿದ್ದು, ಆ ಕಂಪನಿಗಳ ಹೆಸರಿನಲ್ಲಿ ಆಸ್ತಿಪಾಸ್ತಿಗಳನ್ನು ಖರೀದಿ ಮಾಡಲಾಗಿದೆ. ಅವುಗಳಲ್ಲಿ ಕೊಡಗಿನಲ್ಲಿರುವ ಆಸ್ತಿಗಳೂ ಸೇರಿವೆ. ಇದುವರೆಗೆ, ಕಾರ್ತಿ ಚಿದಂಬರಂ ಅವರು ಅಡಗಿಸಿಟ್ಟಿದ್ದ 65.88 ಕೋಟಿ ರೂ.ಗಳ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ. ವಿವರಿಸಿದೆ.
Assets worth ₹ 11.04 crore of Congress MP Karti Chidambaram and others have been seized by the Enforcement Directorate for alleged money laundering in the INX Media case. The seized assets include a property in Karnataka's Coorg district, the ED said in a statement.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm