ಬ್ರೇಕಿಂಗ್ ನ್ಯೂಸ್
20-04-23 12:37 pm HK News Desk ದೇಶ - ವಿದೇಶ
ಯೆಮೆನ್, ಎ.20: ಯೆಮೆನ್'ನ ರಾಜಧಾನಿ ಸನಾದಲ್ಲಿ ರಂಜಾನ್ ಪ್ರಯುಕ್ತ ಆಯೋಜಿಸಲಾಗಿದ್ದ ಚಾರಿಟಿ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಉಂಟಾಗಿ 85 ಮಂದಿ ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ರಂಜಾನ್ ಪ್ರಯುಕ್ತ ಬಂಡುಕೋರರ ಗುಂಪು ರಾಜಧಾನಿಯಲ್ಲಿ ಹಣಕಾಸಿನ ನೆರವು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಇದನ್ನರಿತ ಜನರು ಸಾಗರೋಪಾದಿಯಲ್ಲಿ ಸ್ಥಳದಲ್ಲಿ ನೆರೆದಿದ್ದರು. ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಜನರು ಸೇರಿದ್ದರಿಂದ ಜನರನ್ನು ನಿಯಂತ್ರಿಸುವಲ್ಲಿ ಆಯೋಜಕರು ವಿಫಲರಾಗಿದ್ದಾರೆ.
ಈ ವೇಳೆ ಜನರ ತಿಕ್ಕಾಟ ಹೆಚ್ಚಾಗಿ ನೆರವು ಪಡೆಯಲು ನಾ ಮುಂದು ತಾಮುಂದು ಎಂದು ಬಂದಿದ್ದರಿಂದ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ 85 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.



ಸನಾ ಮಧ್ಯಭಾಗದಲ್ಲಿರುವ ಓಲ್ಡ್ ಸಿಟಿಯಲ್ಲಿ ನೂರಾರು ಬಡ ವ್ಯಾಪಾರಿಗಳು ಕಾರ್ಯಕ್ರಮದಲ್ಲಿ ನೆರವು ಪಡೆಯಲು ಒಟ್ಟಿಗೆ ಜಮಾಯಿಸಿದ್ದರು. ನೆರವು ನೀಡಲು ಆಯೋಜಕರು ಸೂಕ್ತ ವ್ಯವಸ್ಥೆ ಮಾಡಿರಲಿಲ್ಲ. ಜನಸಮೂಹ ಒಂದೇ ಬಾರಿಗೆ ಸೇರಿದ್ದರಿಂದ ತಳ್ಳಾಟ ನೂಕಾಟ ಶುರುವಾಗಿದ್ದು, ಇದರಿಂದ ಭಾರಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ನೀಡದೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಕಾಲ್ತುಳಿತಲ್ಲಿ ಗಾಯಗೊಂಡ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.




ದುರಂತದ ಬಳಿಕ ಕಾರ್ಯಕ್ರಮ ಆಯೋಜಿಸಿದ್ದ ಶಾಲೆಯನ್ನು ಪೊಲೀಸರು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದು, ಇದೀಗ ಸ್ಥಳಧಲ್ಲಿ ಪತ್ರಕರ್ತರು ಸೇರಿದಂತೆ ಜನರ ಪ್ರವೇಶವನ್ನು ನಿರಾಕರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೌತಿಗಳ ಗುಂಪಿನ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯೆಮೆನ್ನ ರಾಜಧಾನಿಯನ್ನು ಇರಾನ್ ಬೆಂಬಲಿತ ಹೌತಿಗಳು ನಿಯಂತ್ರಣಕ್ಕೆ ಪಡೆದಿದ್ದಾರೆ. 2014 ರಲ್ಲಿ ಸರ್ಕಾರದ ಹಿಡಿತದಿಂದ ದೇಶವನ್ನು ತಮ್ಮ ಸುಪರ್ದಿಗೆ ಪಡೆದುಕೊಂಡರು.
At least 85 people have died in a stampede in Yemen's capital Sanaa as hundreds gathered in a school to receive aid, witnesses and Houthi media said on Thursday, reported Reuters. Houthi rebels say that dozens more were injured in the incident. Several videos of the incident showing people running in large numbers and dead lying on the floor are doing rounds on social media.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm