ಬ್ರೇಕಿಂಗ್ ನ್ಯೂಸ್
21-04-23 02:59 pm HK News Desk ದೇಶ - ವಿದೇಶ
ಶ್ರೀನಗರ, ಎ.21: ಜಮ್ಮು ಮತ್ತು ಕಾಶ್ಮೀರದ ರಜೌರಿ ವಲಯದ ಪೂಂಚ್ ಸಮೀಪ ಸೇನಾ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಗಡಿಯಲ್ಲಿಉಗ್ರ ಕೃತ್ಯ ನಿಗ್ರಹಕ್ಕೆ ನಿಯೋಜನೆಗೊಂಡಿದ್ದ ರಾಷ್ಟ್ರೀಯ ರೈಫಲ್ಸ್ ಪಡೆಗೆ ಸೇರಿದ ಯೋಧರು ಮೃತಪಟ್ಟಿದ್ದಾರೆ ಎಂದು ಭಾರತೀಯ ರಕ್ಷಣಾ ಇಲಾಖೆ ಮಾಹಿತಿ ನೀಡಿದೆ.
ಘಟನೆಯಲ್ಲಿ ಓರ್ವ ಯೋಧ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಮೀಪದ ರಜೌರಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ ಸೇನಾ ವಾಹನಗಳು ಭಿಂಬರ್ಗಲಿಯಿಂದ ಸಾಂಗಿಯೋಟ್ಗೆ ತೆರಳುತ್ತಿದ್ದ ವೇಳೆ ಭಾಟಾ ಧುರಿಯಾ ಬಳಿ ಅಪರಿಚಿತ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಭಾರೀ ಮಳೆಯಿಂದ ಉಂಟಾಗಿದ್ದ ಮಂದ ಬೆಳಕಿನ ಲಾಭ ಪಡೆದ ಉಗ್ರರು ಸೇನಾ ವಾಹನದ ಮೇಲೆ ನಡೆಸಿದ ಗ್ರೆನೇಡ್ ದಾಳಿಯಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
![]()
ಘಟನೆ ಸಂಭವಿಸಿದ ತಕ್ಷಣವೇ ಕಾರ್ಯ ಪ್ರವೃತ್ತರಾದ ಸೇನಾ ಪಡೆಗಳು, ದಾಳಿ ನಡೆಸಿದ ಉಗ್ರರಿಗೆ ರಜೌರಿ ವಲಯದಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿವೆ. ಇತ್ತ ಘಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ರೈಫಲ್ಸ್ ಪಡೆಯ ಮುಖ್ಯಸ್ಥರು ಪರಿಶೀಲನೆ ನಡೆಸಿದರು. ಪ್ರಾಥಮಿಕ ವರದಿಗಳ ಪ್ರಕಾರ, ಸಿಡಿಲು ಬಡಿದು ಸೇನಾ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದೇ ಹೇಳಲಾಗಿತ್ತು. ಬಳಿಕ ಸಂಶಯಾಸ್ಪದ ಸ್ಫೋಟದಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ವರದಿಯಾಗಿತ್ತು. ಆ ನಂತರ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಬಳಿಕ ಇದು ಉಗ್ರರ ಕೃತ್ಯ ಎಂದು ತಿಳಿದು ಬಂದಿದೆ.

ಸ್ಥಳೀಯ ಪೊಲೀಸರ ಪ್ರಕಾರ ಪಾಕಿಸ್ತಾನ ಪೋಷಿತ ಲಷ್ಕರೆ ತಯ್ಬಾ ಸಂಘಟನೆ ಬೆಂಬಲಿತ 'ಪೀಪಲ್ಸ್ ಆಫ್ ಆಂಟಿ ಪ್ಯಾಸಿಸ್ಟ್ ಫ್ರಂಟ್' ದಾಳಿಯ ಹೊಣೆ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.

ದುರ್ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ''ಇದೊಂದು ದುರಾದೃಷ್ಟಕರ ಘಟನೆ. ಮೃತ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ, ಆವರ ಕುಟುಂಬಸ್ಥರಿಗೆ ದುಃಖ ಬರಿಸುವ ಶಕ್ತಿ ಆ ಭಗವಂತ ನೀಡಲಿ,'' ಎಂದು ಸಂತಾಪ ಸೂಚಿಸಿದ್ದಾರೆ.
ಜಮ್ಮು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ20 ಸಮ್ಮೇಳ ;
ಮುಂದಿನ ತಿಂಗಳು ಜಿ20 ಸಮ್ಮೇಳನದ ಪ್ರವಾಸೋದ್ಯಮ ಕಾರ್ಯಕಾರಿ ಗುಂಪು ಸಭೆ ಶ್ರೀನಗರದಲ್ಲಿ ನಡೆಯಬೇಕಿದೆ. ಈ ಹೊತ್ತಲ್ಲೇ ಉಗ್ರರ ಕೃತ್ಯ ನಡೆದಿರುವುದು ಭದ್ರತೆಯ ಆತಂಕ ಹೆಚ್ಚಿಸಿದೆ. ಕಳೆದ ತಿಂಗಳಷ್ಟೇ ಗೃಹ ಸಚಿವ ಅಮಿತ್ ಶಾ, ಭದ್ರತಾ ಸಲಹೆಗಾರ ಅಜಿತ್ ಧೋವಲ್ ಕೇಂದ್ರಾಡಳಿತ ಪ್ರದೇಶದಲ್ಲಿನ ಭದ್ರತೆ ಕುರಿತಂತೆ ಪರಿಶೀಲನೆ ನಡೆಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಸೇನಾ ವಾಹನದ ಮೇಲೆ ಭಯೋಧಿತ್ಪಾದಕರು ದಾಳಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.
Security forces have launched a massive search operation in the dense forests of the Bata-Doriya area after a terrorist attack in Jammu and Kashmir's Poonch killed five Indian Army personnel and injured one, officials said on Friday. The entire area has been cordoned off while drones and sniffer dogs are being used to sniff out the terrorists that might be hiding in the area, they said.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm