ಬ್ರೇಕಿಂಗ್ ನ್ಯೂಸ್
23-04-23 09:46 pm HK News Desk ದೇಶ - ವಿದೇಶ
ತಿರುವನಂತಪುರಂ, ಎ.23 : ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸೋಮವಾರ ಕೇರಳಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಪತ್ರ ಬರೆದ ವ್ಯಕ್ತಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕೇರಳ ಪ್ರವಾಸದ ವೇಳೆ ಆತ್ಮಹತ್ಯಾ ದಾಳಿ ನಡೆಸುವುದಾಗಿ ಅಪರಿಚಿತ ವ್ಯಕ್ತಿ ಹೆಸರಿನಲ್ಲಿ ಬಿಜೆಪಿ ಕಚೇರಿಗೆ ಬೆದರಿಕೆ ಪತ್ರ ರವಾನಿಸಲಾಗಿತ್ತು. ಜೊತೆಗೆ ಪ್ರಧಾನಿ ಭದ್ರತೆಗೆ ನಿಯೋಜಿಸಲಾಗಿದ್ದ ಭದ್ರತಾ ವಿವರವೂ ಸೋರಿಕೆಯಾಗಿದ್ದು, ಇದು ರಾಜ್ಯ ಪೊಲೀಸರಿಂದ ಆದ ಗಂಭೀರ ಭದ್ರತಾ ಲೋಪ ಎಂಬ ಟೀಕೆ ವ್ಯಕ್ತವಾಗಿತ್ತು. ಇದೀಗ ಪತ್ರ ಬರೆದಿದ್ದ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಕೊಚ್ಚಿ ನಗರದಲ್ಲಿ ವ್ಯಾಪಾರಿಯಾಗಿರುವ ಕ್ಸೇವಿಯರ್ ಎಂಬಾತ ಬೇರೊಬ್ಬನ ಹೆಸರಿನಲ್ಲಿ ಪ್ರಧಾನಿ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಕಳುಹಿಸಿದ್ದ ಎಂದು ತಿಳಿದುಬಂದಿದೆ. ಆತನನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಲಯಾಳಂನಲ್ಲಿ ಬರೆದ ಪತ್ರದಲ್ಲಿ ತಾನು ಕೊಚ್ಚಿ ನಿವಾಸಿ ಎಂದು ಬರೆದಿದ್ದ. ಮೋದಿಗೆ ಆತ್ಮಾಹುತಿ ದಾಳಿ ಮಾಡುವುದಾಗಿ ಬರೆದ ಪತ್ರವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಸುರೇಂದ್ರನ್ ಅವರ ಕಚೇರಿಗೆ ಕಳುಹಿಸಲಾಗಿತ್ತು. ಅವರು ಅದನ್ನು ಕಳೆದ ವಾರ ಪೊಲೀಸರ ಕೈಗೆ ನೀಡಿದ್ದರು.
ಪತ್ರದ ಬೆನ್ನು ಹತ್ತಿ ತನಿಖೆ ನಡೆಸಿದ ಪೊಲೀಸರು ಆರೋಪಿ ಕ್ಸೇವಿಯರ್ನನ್ನು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ಕೊಚ್ಚಿ ನಿವಾಸಿ ಎನ್.ಜೆ. ಜಾನಿ ಅವರ ಹೆಸರಿನಲ್ಲಿ ಆರೋಪಿ ಪತ್ರ ಬರೆದಿದ್ದ. ಪೊಲೀಸರು ಜಾನಿಯನ್ನು ಬಂಧಿಸಬೇಕೆಂದು ಆತ ಬಯಸಿದ್ದ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಏಪ್ರಿಲ್ 24 ಮತ್ತು 25ರಂದು ಪ್ರಧಾನಿ ಕೇರಳಕ್ಕೆ ಬರುತ್ತಿದ್ದು ಭದ್ರತಾ ವ್ಯವಸ್ಥೆಯ ಭಾಗವಾಗಿ ಕೊಚ್ಚಿ ನಗರದಲ್ಲಿ 2,060 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರಧಾನಿ ಅವರ ರೋಡ್ ಶೋ ವೇಳೆ ಸುಮಾರು 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ನಗರ ಪೊಲೀಸ್ ಕಮಿಷನರ್ ಕೆ. ಸೇತುರಾಮನ್ ತಿಳಿಸಿದ್ದಾರೆ. ,
ಮೋದಿ ಅವರು ಮಂಗಳವಾರ ಬೆಳಗ್ಗೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಲಿದ್ದಾರೆ. ಬಳಿಕ ಸೆಂಟ್ರಲ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ 4 ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿರುವ ಮೋದಿ, ಟೆಕ್ನೋ ಸಿಟಿಗೆ ಶಂಕುಸ್ಥಾಪನೆ ಮತ್ತು ಕೊಚ್ಚಿ ವಾಟರ್ ಮೆಟ್ರೋಗೂ ಚಾಲನೆ ನೀಡಲಿದ್ದಾರೆ.
The Kerala Police on Sunday arrested a man who allegedly sent a letter threatening a suicide bomb attack on Prime Minister Narendra Modi who will be visiting the state on April 24 and 25 to take part in various programmes. Kochi resident Xavier, who runs a business in the city, was arrested by police for allegedly writing the threatening letter in the name of another person.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm