ಬ್ರೇಕಿಂಗ್ ನ್ಯೂಸ್
27-10-20 02:09 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಲಿಕ್ಕರ್ ದೊರೆ ವಿಜಯ ಮಲ್ಯಗೆ ಸುಪ್ರೀಂ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ವಿಜಯ ಮಲ್ಯ ಮಾಲೀಕತ್ವದ ಯುಬಿಎಚ್ಎಲ್ ಕಂಪನಿಯನ್ನು ಬರ್ಖಾಸ್ತುಗೊಳಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಜಯ್ ಮಲ್ಯ ಪರ ಅರ್ಜಿಯನ್ನು ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ತಳ್ಳಿ ಹಾಕಿದ್ದು, 102 ವರ್ಷ ಹಳೆಯದಾದ ಯುನೈಟೆಡ್ ಬ್ರೂವರೀಸ್ ಹೋಲ್ಡಿಂಗ್ ಸಂಸ್ಥೆ ಬರ್ಖಾಸ್ತುಗೊಳ್ಳುವುದು ಬಹುತೇಕ ಖಚಿತವಾಗಿದೆ.
ಎಸ್ ಬಿಐ ಬ್ಯಾಂಕ್ ಸಂಸ್ಥೆಗಳ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಈವರೆಗೆ 3600 ಕೋಟಿ ರೂ. ಸಾಲವನ್ನು ವಸೂಲಿ ಮಾಡಲಾಗಿದೆ. ಆದರೆ, ಇನ್ನೂ 11 ಸಾವಿರ ಕೋಟಿ ರೂಪಾಯಿ ವಸೂಲಿಗೆ ಬಾಕಿ ಇದೆ. ಹೀಗಾಗಿ ಯುಬಿಎಚ್ ಎಲ್ ಸಂಸ್ಥೆಯನ್ನು ಬರ್ಖಾಸ್ತುಗೊಳಿಸಿ ಸಾಲದ ಹಣ ರಿಕವರಿ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಕೇಳಿಕೊಂಡರು. ಇದೇ ವೇಳೆ, ಬ್ಯಾಂಕ್ ಪರ ವಕೀಲರು ವಾದ ಮಂಡಿಸಿ, ಯುಬಿಎಚ್ಎಲ್ ಸಂಸ್ಥೆಯ ಮಾರುಕಟ್ಟೆಯ ಮೌಲ್ಯ ಸಾಲಕ್ಕಿಂತ ಹೆಚ್ಚಿದೆ. ಹೀಗಾಗಿ ಸಂಸ್ಥೆಯನ್ನು ಉಳಿಸಿಕೊಡಬೇಕೆಂದು ಮನವಿ ಮಾಡಿದರು. ಆದರೆ, ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಯುಬಿಎಚ್ ಎಲ್ ಕಂಪೆನಿಯ ವಾದವನ್ನು ಪುರಸ್ಕರಿಸದೆ ಕರ್ನಾಟಕ ಹೈಕೋರ್ಟಿನ ತೀರ್ಪನ್ನು ಎತ್ತಿಹಿಡಿದಿದೆ.
ವಿಜಯ ಮಲ್ಯ ಕಿಂಗ್ ಫಿಶರ್ ಏರ್ ಲೈನ್ಸ್ ಗಾಗಿ ಏಳು ಸಾವಿರ ಕೋಟಿಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಆದರೆ, ಯುನೈಟೆಡ್ ಬ್ರಾವರೀಸ್ ಸಂಸ್ಥೆಯಲ್ಲಿ 52.34 ಶೇಕಡಾ ಷೇರನ್ನು ಉಳಿಸಿಕೊಂಡಿದ್ದರು. ಹೀಗಾಗಿ ಯುಬಿ ಸಂಸ್ಥೆಯ ಒಡೆತನವೂ ವಿಜಯ ಮಲ್ಯ ಅವರದ್ದೇ ಆಗಿರುವುದರಿಂದ ಹೈಕೋರ್ಟ್ ಆ ಸಂಸ್ಥೆಯನ್ನು ಬರ್ಖಾಸ್ತುಗೊಳಿಸಿ ಸಾಲ ರಿಕವರಿ ಮಾಡಿಕೊಳ್ಳಲು ಬ್ಯಾಂಕುಗಳಿಗೆ ಅವಕಾಶ ನೀಡಿತ್ತು. ಕಳೆದ 2018ರ ಫೆಬ್ರವರಿಯಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ವಿಜಯ ಮಲ್ಯ ಸುಪ್ರೀಂ ಮೆಟ್ಟಿಲೇರಿದ್ದರು. ಅಲ್ಲಿಯೂ ವಿಜಯ ಮಲ್ಯಗೆ ಹಿನ್ನಡೆಯಾಗಿದ್ದು ಯುಬಿ ಸಂಸ್ಥೆ ಇತಿಸಾಹ ಸೇರುವ ದಿನ ಸನ್ನಿಹಿತವಾಗಿದೆ.
The Supreme Court on Monday dismissed a plea filed by liquor baron Vijay Mallya`s United Breweries Holdings Limited (UBHL) to challenge a Karnataka High Court order to uphold the winding up of the company for recovery of dues payable by Kingfisher Airlines Ltd.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm