ಬ್ರೇಕಿಂಗ್ ನ್ಯೂಸ್
27-10-20 08:31 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 27: ಜಮ್ಮು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ಕಾಯ್ದೆ ರದ್ದಾದ ಬಳಿಕ ಬದಲಾವಣೆಯ ಗಾಳಿ ಬೀಸಲು ಆರಂಭಿಸಿದೆ. ಇದೀಗ ಆ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಕುದುರಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯ ಮಹತ್ವದ ಆದೇಶ ಹೊರಡಿಸಿದ್ದು, ದೇಶದ ಯಾವುದೇ ಭಾಗದ ಜನ ಜಮ್ಮು ಕಾಶ್ಮೀರದಲ್ಲಿ ಭೂಮಿ ಖರೀದಿಸಲು ಅವಕಾಶ ನೀಡಿದೆ.
ಕಳೆದ ಬಾರಿ ಜಮ್ಮು ಕಾಶ್ಮೀರದ ವಿವಾದಾತ್ಮಕ ಕಾಯ್ದೆ 370 ಮತ್ತು 35 ಎ ಕಾಯ್ದೆಗಳನ್ನು ರದ್ದುಪಡಿಸಿದ ಬಳಿಕ ಆಸ್ತಿ ಖರೀದಿಗೆ ಅವಕಾಶ ಮುಕ್ತ ಎಂದು ಹೇಳಲಾಗಿತ್ತು. ಆದರೆ, ಅದಕ್ಕೆ ಸೂಕ್ತ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಿರಲಿಲ್ಲ. ಪ್ರವಾಸೋದ್ಯಮ ಉತ್ತೇಜನಕ್ಕೂ ಯಾವುದೇ ಹೊಸ ಯೋಜನೆ ಪ್ರಕಟಿಸಿರಲಿಲ್ಲ. ಇದೀಗ ಜಮ್ಮು ಕಾಶ್ಮೀರದಲ್ಲಿಯೂ ರಿಯಲ್ ಎಸ್ಟೇಟ್ (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ -2016 (ರೇರಾ) ಅನ್ನು ಅಳವಡಿಸಿ ಕೇಂದ್ರ ಸರಕಾರ ಆದೇಶ ಮಾಡಿದೆ. ಅಲ್ಲದೆ, ಆಸ್ತಿ ಖರೀದಿ ವಿಚಾರದಲ್ಲಿ ನಿಯಮಗಳನ್ನು ಸರಳಗೊಳಿಸಿದೆ.
ಇದರೊಂದಿಗೆ ತಕ್ಷಣದಿಂದಲೇ ಜಮ್ಮು ಕಾಶ್ಮೀರದಲ್ಲಿ ರೇರಾ ಕಾಯ್ದೆ ಜಾರಿಗೆ ಬರಲಿದ್ದು, ಯಾರು ಬೇಕಾದರೂ ಆಸ್ತಿ ಖರೀದಿಸಿ ವಾಸ ಮಾಡಬಹುದು. ಅಲ್ಲದೆ, ಅಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ತೀವ್ರ ಗತಿ ಪಡೆಯಲಿದೆ. ಈ ಹಿಂದೆ ಆರ್ಟಿಕಲ್ 35 ಎ ಕಾರಣದಿಂದ ಜಮ್ಮು ಕಾಶ್ಮೀರ ಹೊರತುಪಡಿಸಿ ದೇಶದ ಇತರೇ ಪ್ರಜೆಗಳು ಆಸ್ತಿ ಖರೀದಿಸಲು ಅವಕಾಶ ಇರಲಿಲ್ಲ.
ದೇಶದ ಇತರ ಪ್ರಜೆಗಳಿಗೂ ಆಸ್ತಿ ಖರೀದಿಸಲು ಕೇಂದ್ರ ಅವಕಾಶ ನೀಡಿರುವುದನ್ನು ಜಮ್ಮು ಕಾಶ್ಮೀರದ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ವಿರೋಧಿಸಿದ್ದಾರೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಜಮ್ಮು ಕಾಶ್ಮೀರವನ್ನು ಕೇಂದ್ರ ಮಾರಾಟಕ್ಕಿಟ್ಟಿದೆ. ಭೂಮಿಯ ಹಸ್ತಾಂತರ ಪ್ರಕ್ರಿಯೆ ಸರಳಗೊಳಿಸಿದ್ದರಿಂದ ಬಡವರಿಗೆ ಕಷ್ಟವಾಗಲಿದೆ ಎಂದಿದ್ದಾರೆ.
In a significant move, the Centre has paved the way for people from outside Jammu and Kashmir to buy land in the Union territory (UT) by amending several laws.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm