ಬ್ರೇಕಿಂಗ್ ನ್ಯೂಸ್
08-05-23 01:23 pm HK News Desk ದೇಶ - ವಿದೇಶ
ತಿರುವನಂತಪುರಂ, ಮೇ 8: ಕೇರಳದ ಮಲಪ್ಪುರಂ ಜಿಲ್ಲೆಯ ಕಡಲತೀರದ ಬಳಿ ಭಾನುವಾರ ಸಂಜೆ ಡಬಲ್ ಡೆಕ್ಕರ್ ಟೂರಿಸ್ಟ್ ಬೋಟ್ ಮುಳುಗಿ 22 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಕೇರಳದ ತುವಲ್ತಿರಮ್ ಬೀಚ್ ನ ಮಲಪ್ಪುರಂ ತನೂರ್ ಪ್ರದೇಶದಲ್ಲಿ ನಿನ್ನೆ ಸಂಜೆ 7 ಗಂಟೆ ವೇಳೆಗೆ ಈ ಅವಘಡ ನಡೆದಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಡಬಲ್ ಡೆಕ್ಕರ್ ದೋಣಿ ಮುಳುಗಿ 7 ಮಕ್ಕಳು ಸೇರಿದಂತೆ, ಕನಿಷ್ಠ 22 ಜನ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಬೋಟ್ ಮಾಲೀಕನ ವಿರುದ್ಧ ಗಂಭೀರ ಪ್ರಕರಣ ದಾಖಲಾಗಿದೆ.

ಮೃತರಿಗೆ ಸಂತಾಪ ಸೂಚಿಸಿ ಪ್ರಧಾನಿ ನರೇಂದ್ರ ಮೋದಿ ಮೃತರ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ
ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ. ಪಿಎಂಎನ್ಆರ್ಎಫ್ನಿಂದ (ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿ) ₹ 2 ಲಕ್ಷದ ಧನಸಹಾಯವನ್ನು ಪ್ರತಿ ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುತ್ತದೆ, ”ಎಂದು ಪ್ರಧಾನ ಮಂತ್ರಿ ಕಚೇರಿ ಭಾನುವಾರ ಸಂಜೆ ಟ್ವೀಟ್ ಮಾಡಿದೆ.


ಕಾಂಗ್ರೆಸ್ ನಾಯಕ ಮತ್ತು ಮಾಜಿ ವಯನಾಡ್ ಸಂಸದ ರಾಹುಲ್ ಗಾಂಧಿ ಕೂಡ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
"ಕೇರಳದ ಮಲಪ್ಪುರಂನಲ್ಲಿ ಹೌಸ್ ಬೋಟ್ ಮುಳುಗಿದ ಸುದ್ದಿಯಿಂದ ದಿಗ್ಭ್ರಮೆಗೊಂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಹೃತ್ಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ." ರಕ್ಷಣಾ ಕಾರ್ಯಾಚರಣೆಯಲ್ಲಿ ಅಧಿಕಾರಿಗಳಿಗೆ ಸಹಾಯ ಮಾಡುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇಂದು ಸ್ಥಳಕ್ಕೆ ಭೇಟಿ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದ್ದು, ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ಮತ್ತು ಆರೋಗ್ಯಾಧಿಕಾರಿಗಳು ಸ್ಥಳೀಯರೊಂದಿಗೆ ತಾನೂರಿನಿಂದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ಸಂತ್ರಸ್ತರಿಗೆ ಗೌರವ ಸೂಚಕವಾಗಿ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವುದರೊಂದಿಗೆ ಸೋಮವಾರವನ್ನು ಶೋಕಾಚರಣೆಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಪೊಲೀಸರ ಪ್ರಕಾರ, ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
AT LEAST 18 people, including children, were drowned when a double-decker tourist boat capsized near a beach at Tanur, a coastal town in Kerala’s Malappuram district, Sunday night. Survivors alleged that the boat was overcrowded and that most of the passengers did not have safety life jackets. According to officials, the incident took place at Thooval Theeram Ottupuram beach near Tanur around 7.30 pm.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm