ಬ್ರೇಕಿಂಗ್ ನ್ಯೂಸ್
29-10-20 08:55 pm Headline Karnataka News Network ದೇಶ - ವಿದೇಶ
ಪ್ಯಾರಿಸ್, ಅಕ್ಟೋಬರ್ 29 : ಯುರೋಪ್ ರಾಷ್ಟ್ರಗಳಲ್ಲಿ ಎರಡನೇ ಹಂತದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ದೇಶಾದ್ಯಂತ ದಿಢೀರ್ ಲಾಕ್ಡೌನ್ ಘೋಷಣೆ ಮಾಡಿದ್ದು ಡಿಸೆಂಬರ್ 1ರ ವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದಿದ್ದಾರೆ.

ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಫ್ರಾನ್ಸ್ ನಲ್ಲಿ ಎರಡನೇ ಬಾರಿ ಲಾಕ್ ಡೌನ್ ಹೇರಲಾಗಿದೆ. ರೆಸ್ಟೋರೆಂಟ್, ಬಾರ್ ಗಳಿಗೆ ನೀಡಿದ್ದ ಅನುಮತಿಯನ್ನು ರದ್ದುಪಡಿಸಿದ್ದು ಅಗತ್ಯ ಸೌಲಭ್ಯಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಉಳಿದಂತೆ ಆರ್ಥಿಕತೆಗೆ ಪೆಟ್ಟು ಬೀಳದಂತೆ ಸಾರ್ವಜನಿಕ ಉದ್ದಿಮೆಗಳು, ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗಿದೆ.
ಕೊರೊನಾ ವೈರಸ್ ಫ್ರಾನ್ಸ್ ದೇಶದ ಎಲ್ಲೆಡೆ ಹರಡುತ್ತಿದ್ದು ನವೆಂಬರ್ ತಿಂಗಳಲ್ಲಿ ಯಾವ ಹಂತಕ್ಕೆ ತಲುಪಬಹುದು ಎಂಬುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಇನ್ನು ಪ್ಯಾರಿಸ್ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಎರಡು ವಾರಗಳ ಹಿಂದೆ ಕರ್ಫ್ಯೂ ಹಾಕಲಾಗಿತ್ತು. ಆದರೆ, ಅದು ವಿಫಲವಾಗಿದೆ ಎನ್ನಲಾಗುತ್ತಿದೆ. ಫ್ರಾನ್ಸ್ ನಲ್ಲಿ ಕೊರೊನಾ ಸೋಂಕಿಗೆ ಈಗಾಗಲೇ 35 ಸಾವಿರ ಮಂದಿ ಬಲಿಯಾಗಿದ್ದಾರೆ. ಯುರೋಪ್ ನ ಇತರ ಭಾಗದಲ್ಲಿಯೂ ಎರಡನೇ ಹಂತದ ಕೊರೊನಾ ಸೋಂಕು ಮೊದಲ ಹಂತಕ್ಕಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸುವ ಸಾಧ್ಯತೆ ಇರಲಿದೆ ಎಂದು ಮ್ಯಾಕ್ರನ್ ಹೇಳಿದ್ದಾರೆ.

ಸದ್ಯಕ್ಕೆ ಮೂರು ಸಾವಿರ ಇಂಟೆನ್ಸಿವ್ ಕೇರ್ ಬೆಡ್ ಫುಲ್ ಆಗಿದ್ದು ನವೆಂಬರ್ ವೇಳೆಗೆ ಅದು 9 ಸಾವಿರಕ್ಕೆ ತಲುಪಲಿದೆ ಎನ್ನುವ ಅಂದಾಜಿದೆ. ಸದ್ಯಕ್ಕೆ 5800 ಐಸಿಯು ಕೆಪಾಸಿಟಿ ಇದ್ದು ಅದನ್ನು ಹತ್ತು ಸಾವಿರಕ್ಕೆ ಏರಿಸುವ ಗುರಿಯಿದೆ ಎಂದಿದ್ದಾರೆ ಮ್ಯಾಕ್ರನ್. ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ. ಲಾಕ್ಡೌನ್ ಬಳಿಕದ ಎರಡು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಿದರೆ ಸಡಿಲಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm