ಬ್ರೇಕಿಂಗ್ ನ್ಯೂಸ್
26-05-23 11:57 am HK News Desk ದೇಶ - ವಿದೇಶ
ನವದೆಹಲಿ, ಮೇ 26: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಮೇ 28ರಂದು ಉದ್ಘಾಟಿಸಲು ದಿನ ನಿಗದಿಯಾಗಿದೆ. ಈ ನಡುವೆ, ಪ್ರಧಾನಿ ಮೋದಿ ಉದ್ಘಾಟನೆ ಮಾಡಬಾರದು ಎಂದು ಪ್ರತಿಪಕ್ಷಗಳು ತಗಾದೆ ಎತ್ತಿದ್ದು ಕಾರ್ಯಕ್ರಮ ಬಹಿಷ್ಕಾರ ಮಾಡಿವೆ. ಸಂಸತ್ ಕಟ್ಟಡ ಉದ್ಘಾಟನೆ ವಿಚಾರ ಭಾರೀ ವಿವಾದಕ್ಕೆ ಈಡಾಗಿರುವಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.
ನೂತನ ಸಂಸತ್ ಭವನದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಮಾಡಬೇಕು. ಈ ಬಗ್ಗೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸುಪ್ರಿಂ ಕೋರ್ಟಿಗೆ ಸಲ್ಲಿಕೆಯಾಗಿದೆ. ಜಯ ಸುಕಿನ್ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದು, ಲೋಕಸಭೆ ಸೆಕ್ರೆಟರಿಯೇಟ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಆಹ್ವಾನಿಸದೆ ಸಂವಿಧಾನ ಉಲ್ಲಂಘನೆ ಮಾಡಲಾಗಿದೆ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆಯಾಗಿದೆ. ಭಾರತೀಯ ಸಂಸತ್ತು ರಾಷ್ಟ್ರಪತಿ, ರಾಜ್ಯಸಭೆ ಮತ್ತು ಲೋಕಸಭೆ ಎಂಬ ಎರಡು ಸದನಗಳನ್ನು ಒಳಗೊಂಡಿದೆ. ಸಂಸತ್ತಿನ ಸದನವನ್ನು ಕರೆಯಲು ಮತ್ತು ಮುಂದೂಡಲು ಅಥವಾ ಲೋಕಸಭೆಯನ್ನು ವಿಸರ್ಜಿಸಲು ರಾಷ್ಟ್ರಪತಿಗಳಿಗೆ ಮಾತ್ರ ಅಧಿಕಾರವಿರುತ್ತದೆ. ಹಾಗಿರುವಾಗ ಸಂಸತ್ತಿನ ಪರಮೋಚ್ಛ ಪದವಿ ಹೊಂದಿರುವ ರಾಷ್ಟ್ರಪತಿ ಅವರೇ ಸಂಸತ್ತನ್ನು ಉದ್ಘಾಟನೆ ಮಾಡಬೇಕು ಎಂದು ಕೇಳಿಕೊಂಡಿದ್ದಾರೆ.
ಈಗಾಗಲೇ ಹೊಸ ಸಂಸತ್ ಕಟ್ಟಡದ ಉದ್ಘಾಟನೆಗೆ ಮೇ 28ರ ದಿನ ನಿಗದಿಯಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಉದ್ಘಾಟಿಸಲಿದ್ದಾರೆಂದು ತಿಳಿಸಲಾಗಿದೆ. ಆದರೆ, ನೂತನ ಸಂಸತ್ ಭವನದ ಉದ್ಘಾಟನೆ ಸಮಾರಂಭವನ್ನು ಬಹಿಷ್ಕರಿಸಲು 20 ಪ್ರತಿಪಕ್ಷಗಳು ನಿರ್ಧರಿಸಿರುವುದು ಭಾರೀ ಬಿಕ್ಕಟ್ಟಿಗೆ ಕಾರಣವಾಗಿದೆ. ದಲಿತ ವರ್ಗದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗೊತ್ತಿ ಸಂಸತ್ತಿನ ಕಟ್ಟಡವನ್ನು ಸ್ವತಃ ಪ್ರಧಾನಿ ಅವರೇ ಉದ್ಘಾಟಿಸಲು ಮುಂದಾಗಿರುವ ನಿರ್ಧಾರವು ದೇಶಕ್ಕೆ ಎಸಗಿದ ಘೋರ ಅವಮಾನ ಮಾತ್ರವಲ್ಲ. ನಮ್ಮ ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ತಮ್ಮ ಜಂಟಿ ಹೇಳಿಕೆಯಲ್ಲಿ ವಿರೋಧ ಪಕ್ಷಗಳು ಹೇಳಿವೆ.
New Parliament building inauguration Live Updates: The row over the decision to invite Prime Minister Narendra Modi to inaugurate the new parliament building instead of President Droupadi Murmu has led to over 20 Opposition parties having boycotted and around 25 attending the event. Several BJP and Opposition leaders have entered a Twitter war due to the latter boycotting the event.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm