ಬ್ರೇಕಿಂಗ್ ನ್ಯೂಸ್
03-06-23 09:04 pm HK News Desk ದೇಶ - ವಿದೇಶ
ನವದೆಹಲಿ, ಜೂ 03: ಒಡಿಶಾದ ಬಾಲಸೋರ್ನಲ್ಲಿ ರೈಲು ಅಪಘಾತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಮೋದಿ ಕಟಕ್ನ ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಲಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.ಕ್ಯಾಬಿನೆಟ್ ಸಹೋದ್ಯೋಗಿಗಳಾದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮೋದಿ ಅವರು ಸ್ಥಳವನ್ನು ಪರಿಶೀಲಿಸಿದರು.
ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ ಘಟನೆ ನಡೆದ ಸ್ಥಳದ ಬಳಿ ಪ್ರಧಾನಿ ಮೋದಿ ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಬಂದಿಳಿದರು. ಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ವಿಕ್ಷೀಸಿದರು. ಅಪಘಾತದಲ್ಲಿ ಗಾಯಗೊಂಡು ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ನಿನ್ನೆ ರಾತ್ರಿ ನಡೆದ ದುರಂತರದಲ್ಲಿ ಈ ವರೆಗೂ 261 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎಂದು ವರದಿಯಾಗಿದೆ. ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಇಂದು ಮುಂಜಾನೆ ಪ್ರಧಾನಿ ಮೋದಿ ಸಭೆ ಕರೆದಿದ್ದರು.
ಶುಕ್ರವಾರ ಸಂಜೆ 7 ಗಂಟೆಗೆ ಬಾಲಸೋರ್ನಲ್ಲಿ ರೈಲಿನ ಒಂದು ಬೋಗಿ ಹಳಿತಪ್ಪಿದ ನಂತರ ಮೂರು ರೈಲುಗಳು ಡಿಕ್ಕಿ ಹೊಡೆದವು. ಅಪಘಾತದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಆಸ್ಪತ್ರೆಗಳಲ್ಲಿ ಗಾಯಗೊಂಡವರನ್ನು ಭೇಟಿಯಾಗಿದ್ದಾರೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಇಂದು ಬೆಳಿಗ್ಗೆ ಬಾಲಸೋರ್ಗೆ ಭೇಟಿ ನೀಡಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.
ಭೀಕರ ರೈಲು ಅಪಘಾತದಲ್ಲಿ ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ರೈಲು ಹಳಿಗಳನ್ನು ಮರು ಸ್ಥಾಪಿಸುವ ಕಾರ್ಯ ಪ್ರಾರಂಭವಾಗಿದೆ ಎಂದು ರೈಲ್ವೇ ವಕ್ತಾರ ಅಮಿತಾಭ್ ಶರ್ಮಾ ಇಂದು ಮಧ್ಯಾಹ್ನ ಹೇಳಿದ್ದಾರೆ. ಭೀಕರ ಅಪಘಾತ ನಡೆದ ಸುಮಾರು 18 ಗಂಟೆಗಳ ನಂತರ ಈ ಮಾಹಿತಿಯನ್ನು ತಿಳಿಸಿದ್ದಾರೆ.
ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಉನ್ನತ ಮಟ್ಟದ ತನಿಖೆಗೆ ರೈಲ್ವೆ ಸಚಿವಾಲಯ ಆದೇಶಿಸಿದೆ. ಮೃತರ ಕುಟುಂಬಕ್ಕೆ ₹ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ₹ 2 ಲಕ್ಷ ಪರಿಹಾರ ನೀಡುವುದಾಗಿ ಸಚಿವಾಲಯ ಘೋಷಿಸಿದೆ. ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಮೃತರ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಗೊಂಡವರಿಗೆ ₹ 50,000 ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.
Prime Minister Narendra Modi on Saturday, June 3, visited Odisha's Balasore, a day after a massive accident took place there. He visited the site of the accident and took stock of the ongoing relief operations going on. He also emphasised a 'Whole of Government' approach to mitigating the monumental tragedy.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm