Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
">
ಬ್ರೇಕಿಂಗ್ ನ್ಯೂಸ್
07-06-23 08:51 pm HK News Desk ದೇಶ - ವಿದೇಶ
ಲಕ್ನೋ, ಜೂನ್ 7: ಉತ್ತರ ಪ್ರದೇಶದ ರಾಜಧಾನಿ ಲಕ್ನೋ ಸಿವಿಲ್ ಕೋರ್ಟ್ ಆವರಣದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬುಧವಾರ ನ್ಯಾಯಾಲಯದಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲರ ವೇಷ ಧರಿಸಿ ಬಂದ ದುಷ್ಕರ್ಮಿಯೊಬ್ಬ ಗ್ಯಾಂಗ್ಸ್ಟ್ನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಗುಂಡಿನ ದಾಳಿಯಲ್ಲಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಂಜೀವ್ ಜೀವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಸಂಜೀವ್ ಇದ್ದಕ್ಕಿದ್ದಂತೆ ಕುಸಿದು ಬಿದ್ದ. ಈ ಗುಂಡಿನ ದಾಳಿಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನನ್ನು ಗುಂಡಿಕ್ಕಿ ಕೊಂದ 2 ತಿಂಗಳ ನಂತರವೇ ಇಂತಹ ಘಟನೆ ನಡೆದಿರುವುದು ಸಂಚಲನ ಮೂಡಿಸಿದೆ.
ಜೀವಾ ಇತ್ತೀಚೆಗಷ್ಟೇ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಖ್ತಾರ್ ಅನ್ಸಾರಿ ಆಪ್ತ ಎಂದು ತಿಳಿದುಬಂದಿದೆ. ಈತ ವಿಚಾರಣೆಗೆ ಆಗಮಿಸಿದ್ದ ವೇಳೆ ವಕೀಲರ ಧಿರಿಸಿನಲ್ಲಿ ಕೋರ್ಟಿಗೆ ಬಂದ ಆರೋಪಿಯೊಬ್ಬ ಗುಂಡಿನ ದಾಳಿ ನಡೆಸಿದಿದ್ದಾನೆ. ಈ ಘಟನೆಯಲ್ಲಿ ಕೆಲವು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರೆನ್ನಲ್ಲಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮತ್ತೊಂದೆಡೆ ಪೊಲೀಸರು ಶೂಟರ್ಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಎಸ್ಸಿ-ಎಸ್ಟಿ ನ್ಯಾಯಾಲಯದ ಕೊಠಡಿಯಲ್ಲಿ ಸಂಜೀವ್ ಜೀವಾಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತ್ತಿದ್ದಾಗ, ಅದೇ ಸಮಯದಲ್ಲಿ ಗುಂಡು ಹಾರಿಸಲಾಗಿದೆ. ಗುಂಡಿನ ದಾಳಿಯಲ್ಲಿ ಸಂಜೀವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸಂಜೀವ್ಗೆ ಗುಂಡು ತಗುಲಿದಾಗ ನ್ಯಾಯಾಲಯದ ಕಲಾಪಗಳು ನಡೆಯುತ್ತಿದ್ದವು. ಈ ಸಂದರ್ಭದಲ್ಲಿ ನ್ಯಾಯಾಧೀಶರು ಅವರ ಕುರ್ಚಿಯ ಮೇಲೆ ಇರಲಿಲ್ಲ. ಆದರೆ ಉಳಿದ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
Gangster Sanjeev Jeeva, reportedly a close aide of Mukhtar Ansari, was shot dead inside the Lucknow Civil Court on Thursday. According to the police officials, the assailant made his way to the court disguised as a lawyer. The gangster was accused of the murder of BJP leader Brahm Dutt Dwivedi and was brought to court for a hearing.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm