ಬ್ರೇಕಿಂಗ್ ನ್ಯೂಸ್
31-10-20 12:16 pm Headline Karnataka News Network ದೇಶ - ವಿದೇಶ
ಅಯೋಧ್ಯೆ, ಅಕ್ಟೋಬರ್ 30: ಸುದೀರ್ಘ 28 ವರ್ಷಗಳ ಬಳಿಕ ದೀಪಾವಳಿ ಹಬ್ಬಕ್ಕೆ ಅಯೋಧ್ಯೆ ಝಗಮಗಿಸಲಿದೆ. ಈವರೆಗೂ ಟೆಂಟ್ ಒಳಗಿದ್ದ ರಾಮನ ವಿಗ್ರಹಕ್ಕೆ ದೀಪಗಳ ಹಬ್ಬದ ಸಡಗರದ ನಡುವೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆರತಿ ಎತ್ತಲಿದ್ದಾರೆ.
1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದ ಬಳಿಕ ವಿವಾದಿತ ಪ್ರದೇಶವಾಗಿದ್ದ ಅಯೋಧ್ಯೆಯಲ್ಲಿ ಯಾವುದೇ ಹಬ್ಬಗಳ ಆಚರಣೆಗೂ ಅನುಮತಿ ಇರಲಿಲ್ಲ. ಈ ಬಾರಿ ಅಯೋಧ್ಯೆ ವಿವಾದ ಮುಕ್ತವಾಗಿದ್ದು, ಭವ್ಯ ರಾಮಮಂದಿರ ನಿರ್ಮಾಣಕ್ಕೆ ಕಾಮಗಾರಿ ನಡೆಯುತ್ತಿದೆ. ಇದೇ ವೇಳೆ, ದೀಪಾವಳಿ ಹಬ್ಬವನ್ನು ಸಡಗರದಿಂದ ನಡೆಸಲು ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಇಷ್ಟು ವರ್ಷಗಳ ಕಾಲ ಪುಟ್ಟ ಟೆಂಟ್ ನಲ್ಲಿದ್ದ ರಾಮನ ವಿಗ್ರಹವನ್ನು ಮಂದಿರ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಆವರಣಕ್ಕೆ ಸ್ಥಳಾಂತರಿಸಿ ಪೂಜಿಸಲಾಗುತ್ತಿದೆ. ದಿನವೂ ಅರ್ಚನೆ, ಪೂಜೆಗಳು ನಡೆಯುತ್ತಿವೆ. ಇದೇ ಜಾಗದಲ್ಲಿ ಈ ಬಾರಿ ದೀಪಾವಳಿ ಆಚರಿಸಲಾಗುತ್ತಿದೆ. ದೀಪಾವಳಿಗೆ ಇಡೀ ರಾಮಮಂದಿರ ಪರಿಸರದಲ್ಲಿ ಲಕ್ಷಾಂತರ ದೀಪಗಳನ್ನು ಹಚ್ಚಿ ಬೆಳಗಿಸಲು ಯೋಜನೆ ಹಾಕಲಾಗಿದೆ. ಮಂದಿರದ ಆವರಣದಲ್ಲಿ ಅಲ್ಲದೆ, ರಾಮ ನಿರ್ಯಾಣಗೊಂಡ ಸರಯೂ ನದಿ ತೀರದಲ್ಲಿಯೂ ಲಕ್ಷಾಂತರ ದೀಪಗಳನ್ನು ಬೆಳಗಿಸಿ ವಿಶಿಷ್ಟವಾಗಿ ದೀಪಗಳ ಹಬ್ಬವನ್ನು ಆಚರಿಸಲು ಯೋಜನೆ ಹಾಕುತ್ತಿದ್ದಾರೆ.
ಕಳೆದ ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದಿತ್ತು. ಅಂದು ಕೂಡ ಇಡೀ ಅಯೋಧ್ಯೆಯನ್ನು ಶೃಂಗರಿಸಿ ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಪ್ರಧಾನಿ ಮೋದಿ ಭೂಮಿಪೂಜೆ ನೆರವೇರಿಸಿದ್ದರು. ಈ ಬಾರಿ ಮೋದಿ ದೀಪಾವಳಿಗೆ ಅಯೋಧ್ಯೆ ಅಥವಾ ವಾರಣಾಸಿಗೆ ಬರುವುದು ಇನ್ನೂ ಅಂತಿಮಗೊಂಡಿಲ್ಲ.
For the first time since 1992, Diwali will be celebrated in the earlier disputed area where the foundation stone for the Ram Temple construction was laid back in August.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm