ಬ್ರೇಕಿಂಗ್ ನ್ಯೂಸ್
31-10-20 12:50 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 31: ಮತಾಂತರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇವಲ ಮದುವೆಯ ಕಾರಣಕ್ಕೆ ಮತಾಂತರ ಆಗುವುದನ್ನು ಒಪ್ಪಲಾಗಲ್ಲ. ಸಮಾಜಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಕರಣ ಒಂದಕ್ಕೆ ಸಂಬಂಧಿಸಿ ಅಭಿಪ್ರಾಯ ಪಟ್ಟಿದೆ. ತಮಗೆ ಪೊಲೀಸರ ರಕ್ಷಣೆ ನೀಡಬೇಕೆಂದು ಹೇಳಿ ವಿವಾಹಿತ ದಂಪತಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ಪಟ್ಟಿದ್ದು, ದಂಪತಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ.
ನ್ಯಾಯಾಧೀಶ ಮಹೇಶ್ ಚಂದ್ರ ತ್ರಿಪಾಠಿ, 2014ರ ತಮ್ಮದೇ ಕೋರ್ಟಿನ ತೀರ್ಪನ್ನು ಉಲ್ಲೇಖಿಸಿ ಈ ಅಭಿಪ್ರಾಯ ನೀಡಿದ್ದಾರೆ. ಯುವತಿ ಮುಸ್ಲಿಂ ಹಾಗೂ ಯುವಕ ಹಿಂದು ಎನ್ನುವುದು ತಿಳಿದಿದ್ದು, ಯುವತಿ ತಿಂಗಳ ಹಿಂದೆ ಮತಾಂತರ ಆಗಿರುವುದೂ ತಿಳಿದಿದೆ. ಇಂಥ ಸಂದರ್ಭದಲ್ಲಿ ಕೇವಲ ಮದುವೆಯ ಉದ್ದೇಶಕ್ಕೆ ಮತಾಂತರ ಆಗಿರುವುದು ಕಂಡುಬರುತ್ತದೆ. ಇದನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ, ಇದು ಸಂವಿಧಾನದ 226ನೇ ವಿಧಿ ಅನ್ವಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
2014ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ಮದುವೆಯಾಗುವ ಕಾರಣಕ್ಕೆ ಮತಾಂತರ ಆಗುವುದು ಸ್ವೀಕಾರಾರ್ಹವಲ್ಲ ಎಂದು ತೀರ್ಪು ನೀಡಿತ್ತು. ಅಂದಿನ ಪ್ರಕರಣದಲ್ಲಿ ಯುವತಿ ಹಿಂದುವಾಗಿದ್ದು, ಯುವಕ ಮುಸ್ಲಿಂ ಆಗಿದ್ದ. ಯುವತಿ ಮತಾಂತರ ಆದ ತಿಂಗಳ ಬಳಿಕ ಮದುವೆಯಾಗಿ, ಕೋರ್ಟಿನಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನು ವಜಾಗೊಳಿಸಿ, ಇದೇ ರೀತಿಯ ತೀರ್ಪು ನೀಡಿತ್ತು.
ಅಲ್ಲದೆ, ಇಸ್ಲಾಂ ಧರ್ಮದ ಹುಡುಗನ ಜೊತೆ ಸ್ನೇಹ ಇದ್ದ ಕಾರಣಕ್ಕೆ ಇಸ್ಲಾಂ ಬಗ್ಗೆ ನಂಬಿಕೆ ಇಲ್ಲದ ಯುವತಿ ಕೇವಲ ಮದುವೆಯ ಕಾರಣಕ್ಕೆ ತನ್ನ ಧರ್ಮ ಬದಲಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿತ್ತು.
Religious conversion only for the purpose of marriage is unacceptable, the Allahabad high court has dismissed a petition filed by an interfaith couple seeking directions to police and the girl’s father not to interfere in their married life.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm