ಬ್ರೇಕಿಂಗ್ ನ್ಯೂಸ್
31-10-20 12:50 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 31: ಮತಾಂತರಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕೇವಲ ಮದುವೆಯ ಕಾರಣಕ್ಕೆ ಮತಾಂತರ ಆಗುವುದನ್ನು ಒಪ್ಪಲಾಗಲ್ಲ. ಸಮಾಜಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಕರಣ ಒಂದಕ್ಕೆ ಸಂಬಂಧಿಸಿ ಅಭಿಪ್ರಾಯ ಪಟ್ಟಿದೆ. ತಮಗೆ ಪೊಲೀಸರ ರಕ್ಷಣೆ ನೀಡಬೇಕೆಂದು ಹೇಳಿ ವಿವಾಹಿತ ದಂಪತಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ಅಭಿಪ್ರಾಯ ಪಟ್ಟಿದ್ದು, ದಂಪತಿ ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿದೆ.
ನ್ಯಾಯಾಧೀಶ ಮಹೇಶ್ ಚಂದ್ರ ತ್ರಿಪಾಠಿ, 2014ರ ತಮ್ಮದೇ ಕೋರ್ಟಿನ ತೀರ್ಪನ್ನು ಉಲ್ಲೇಖಿಸಿ ಈ ಅಭಿಪ್ರಾಯ ನೀಡಿದ್ದಾರೆ. ಯುವತಿ ಮುಸ್ಲಿಂ ಹಾಗೂ ಯುವಕ ಹಿಂದು ಎನ್ನುವುದು ತಿಳಿದಿದ್ದು, ಯುವತಿ ತಿಂಗಳ ಹಿಂದೆ ಮತಾಂತರ ಆಗಿರುವುದೂ ತಿಳಿದಿದೆ. ಇಂಥ ಸಂದರ್ಭದಲ್ಲಿ ಕೇವಲ ಮದುವೆಯ ಉದ್ದೇಶಕ್ಕೆ ಮತಾಂತರ ಆಗಿರುವುದು ಕಂಡುಬರುತ್ತದೆ. ಇದನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಹೇಳಿದೆ. ಅಲ್ಲದೆ, ಇದು ಸಂವಿಧಾನದ 226ನೇ ವಿಧಿ ಅನ್ವಯ ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.
2014ರಲ್ಲಿ ಇದೇ ರೀತಿಯ ಪ್ರಕರಣದಲ್ಲಿ ಅಲಹಾಬಾದ್ ಕೋರ್ಟ್ ಮದುವೆಯಾಗುವ ಕಾರಣಕ್ಕೆ ಮತಾಂತರ ಆಗುವುದು ಸ್ವೀಕಾರಾರ್ಹವಲ್ಲ ಎಂದು ತೀರ್ಪು ನೀಡಿತ್ತು. ಅಂದಿನ ಪ್ರಕರಣದಲ್ಲಿ ಯುವತಿ ಹಿಂದುವಾಗಿದ್ದು, ಯುವಕ ಮುಸ್ಲಿಂ ಆಗಿದ್ದ. ಯುವತಿ ಮತಾಂತರ ಆದ ತಿಂಗಳ ಬಳಿಕ ಮದುವೆಯಾಗಿ, ಕೋರ್ಟಿನಲ್ಲಿ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯನ್ನು ವಜಾಗೊಳಿಸಿ, ಇದೇ ರೀತಿಯ ತೀರ್ಪು ನೀಡಿತ್ತು.
ಅಲ್ಲದೆ, ಇಸ್ಲಾಂ ಧರ್ಮದ ಹುಡುಗನ ಜೊತೆ ಸ್ನೇಹ ಇದ್ದ ಕಾರಣಕ್ಕೆ ಇಸ್ಲಾಂ ಬಗ್ಗೆ ನಂಬಿಕೆ ಇಲ್ಲದ ಯುವತಿ ಕೇವಲ ಮದುವೆಯ ಕಾರಣಕ್ಕೆ ತನ್ನ ಧರ್ಮ ಬದಲಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿತ್ತು.
Religious conversion only for the purpose of marriage is unacceptable, the Allahabad high court has dismissed a petition filed by an interfaith couple seeking directions to police and the girl’s father not to interfere in their married life.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm