ಬ್ರೇಕಿಂಗ್ ನ್ಯೂಸ್
12-06-23 06:14 pm HK News Desk ದೇಶ - ವಿದೇಶ
ಜೈಪುರ, ಜೂನ್ 12: ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ಮೇ 26ರಂದು ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮ, ಬರೋಬ್ಬರಿ 2,143 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ವಿಶ್ವ ದಾಖಲೆಯೇ ನಿರ್ಮಾಣವಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿವ ಪ್ರಮೋದ್ ಜೈನ್ ಭಾಯಾ ಅವರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಸಲಾಯಿತು. ಹಸೆ ಮಣೆ ಏರಿದ ದಂಪತಿಗಳಿಗೆ ಗಣ್ಯರು ಆಶೀರ್ವದಿಸಿದರು.

ಅಂದ ಹಾಗೆ ಈ ಸಾಮೂಹಿಕ ಮದುವೆ ಸಮಾರಂಭವು ಎರಡು ದಾಖಲೆಗಳನ್ನು ನಿರ್ಮಿಸಿದೆ. 12 ಗಂಟೆಗಳಲ್ಲಿ ನಡೆದ ಅತೀ ಹೆಚ್ಚು ಮದುವೆ ಹಾಗೂ 24 ಗಂಟೆಗಳಲ್ಲಿ ನಡೆದ ಅತಿ ಹೆಚ್ಚು ಮದುವೆ ಎನ್ನುವ ದಾಖಲೆ ಈ ಸಾಮೂಹಿಕ ಮದುವೆ ಸಮಾರಂಭಕ್ಕೆ ದೊರಕಿದೆ. ಈ ಹಿಂದೆ 2013ರಲ್ಲಿ 963 ಜೋಡಿ ಮದುವೆಯಾಗಿದ್ದು, ಅದು ದಾಖಲೆಯನ್ನು ಹೊಂದಿತ್ತು. ಅದರ ದಾಖಲೆಯನ್ನು ಈಗಿನ ಸಮಾರಂಭ ಮುರಿದಿದೆ.


ಶ್ರೀ ಮಹಾವೀರ ಗೋಶಾಲಾ ಕಲ್ಯಾಣ ಸಂಸ್ಥಾನವು ಈ ಸಾಮೂಹಿಕ ವಿವಾಹವನ್ನು ಏರ್ಪಡಿಸಿತ್ತು. ಅದರಲ್ಲಿ ಹಿಂದೂಗಳ ಜತೆ ಮುಸ್ಲಿಂ ಜೋಡಿಗಳೂ ಮದುವೆ ಮಾಡಿಕೊಂಡಿರುವುದು ವಿಶೇಷ. ಪ್ರತಿ ದಂಪತಿಗೆ ಆಯಾ ಸಮುದಾಯದ ಪುರೋಹಿತರು, ಕ್ವಾಜಿಗಳ ಕೈಯಿಂದಲೇ ಮದುವೆ ಮಾಡಿಸಲಾಯಿತು. ಮದುವೆ ಮುಗಿದ ನಂತರ ರಾಜಸ್ಥಾನ ಸರ್ಕಾರದ ಅಧಿಕಾರಿಗಳು ದಂಪತಿಗಳಿಗೆ ಮದುವೆ ಪ್ರಮಾಣಪತ್ರಗಳನ್ನು ನೀಡಿದರು.

ಮದುವೆ ನಂತರ ಪ್ರತಿ ದಂಪತಿಗೆ ಆಭರಣ, ಹಾಸಿಗೆ, ಅಗತ್ಯ ಅಡುಗೆ ಪಾತ್ರೆಗಳು, ದೂರದರ್ಶನ, ರೆಫ್ರಿಜರೇಟರ್ಮ ಕೂಲರ್ನಂತಹ ಗೃಹೋಪಯೋಗಿ ಉಪಕರಣಗಳನ್ನು ಉಡುಗೊರೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಒಟ್ಟು ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ನೂತನ ವಧು ವರರಿಗೆ ಆಶೀರ್ವದಿಸಿದ್ದಾರೆ.
A mass wedding ceremony in Rajasthan’s Baran has set a new world record, bringing together 2,143 couples in a joyous celebration of love and commitment. Organized by Shri Mahaveer Goshala Kalyan Sansthan, a registered trust dedicated to serving marginalized communities, this remarkable event aimed to help underprivileged individuals fulfil their dreams of marriage.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm