ಬ್ರೇಕಿಂಗ್ ನ್ಯೂಸ್
17-06-23 12:28 pm HK News Desk ದೇಶ - ವಿದೇಶ
ಇಂಫಾಲ, ಜೂನ್ 17: ಮಣಿಪುರದ ಇಂಫಾಲದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಬಿಜೆಪಿ ನಾಯಕರ ಮನೆಗಳನ್ನು ಗುರಿಯಾಗಿಸಿಕೊಂಡ ಗುಂಪೊಂದು ಬೆಂಕಿ ಹಚ್ಚಲು ಯತ್ನ ನಡೆಸಿದೆ. ಈ ವೇಳೆ ಭದ್ರತಾ ಪಡೆ ಹಾಗೂ ಗುಂಪಿನ ನಡುವೆ ಘರ್ಷಣೆ ಏರ್ಪಟ್ಟಿದ್ದು, ಘಟನೆಯಲ್ಲಿ ಇಬ್ಬರು ನಾಗರೀಕರಿಗೆ ಗಾಯಗಳಾಗಿವೆ.
ಕ್ವಾಥಾ ಮತ್ತು ಕಾಂಗ್ವೈ ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಲಾಗಿದ್ದು , ಇಂದು ಬೆಳಗಿನ ಜಾವದವರೆಗೂ ನಿರಂತರ ಗುಂಡಿನ ದಾಳಿಗಳು ನಡೆದಿವೆ ಎಂದು ವರದಿಗಳು ತಿಳಿಸಿವೆ.
ಸೇನೆ, ಅಸ್ಸಾಂ ರೈಫಲ್ಸ್, ರ್ಯಾಪಿಡ್ ಆಕ್ಷನ್ ಫೋರ್ಸ್ ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಮಧ್ಯರಾತ್ರಿಯವರೆಗೆ ಧ್ವಜ ಮೆರವಣಿಗೆಯನ್ನು ಕೈಗೊಂಡವು.

ಈ ನಡುವೆ ಅಡ್ವಾನ್ಸ್ ಆಸ್ಪತ್ರೆ ಬಳಿಯ ಅರಮನೆ ಕಾಂಪೌಂಡ್ ನಲ್ಲಿ ಬೆಂಕಿ ಹಚ್ಚುವ ಯತ್ನ ನಡೆದಿದೆ. ಸುಮಾರು 1,000 ಜನರ ಗುಂಪು ನಿನ್ನೆ ಸಂಜೆ ಒಟ್ಟುಗೂಡಿದ್ದು, ಬೆಂಕಿ ಮತ್ತು ವಿಧ್ವಂಸಕ ಕೃತ್ಯಕ್ಕೆ ಪ್ರಯತ್ನಿ ನಡೆಸಿದೆ.
ಈ ವೇಳೆ ಗುಂಪನ್ನು ಚದುರಿಸಲು ಆರ್ಎಎಫ್ ಅಶ್ರುವಾಯು ಮತ್ತು ರಬ್ಬರ್ ಬುಲೆಟ್ಗಳನ್ನು ಹಾರಿಸಿದ್ದು, ಇದರಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಇದರ ಜೊತೆಗೆ ಮಣಿಪುರ ವಿಶ್ವವಿದ್ಯಾನಿಲಯದ ಬಳಿಯೂ ಜನರು ಗುಂಪು ಸೇರಿದ್ದಾರೆ. ರಾತ್ರಿ 10.40ಕ್ಕೆ ತೊಂಗ್ಜು ಬಳಿ ಜಮಾಯಿಸಿದ 200ರಿಂದ 300 ಮಂದಿ, ಸ್ಥಳೀಯ ಶಾಸಕರ ನಿವಾಸವನ್ನು ಧ್ವಂಸಗೊಳಿಸಲು ಯತ್ನ ನಡೆಸಿದ್ದಾರೆ. ಈ ವೇಳೆ ಆರ್'ಎಎಫ್ ಗುಂಪನ್ನು ಚದುರಿಸಿತು.
ಮಧ್ಯರಾತ್ರಿ ಇಂಫಾಲ್ ವೆಸ್ಟ್ನಲ್ಲಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಅಧಿಕಾರಿಮಯುಮ್ ಶಾರದಾ ದೇವಿ ಅವರ ನಿವಾಸವನ್ನು ಧ್ವಂಸ ಮಾಡಲು ಗುಂಪು ಪ್ರಯತ್ನಿಸಿತು, ಆದರೆ, ಈ ಪ್ರಯತ್ನವನ್ನು ಸೇನೆ ಮತ್ತು ಆರ್ಎಎಫ್ ವಿಫಲಗೊಳ್ಳುವಂತೆ ಮಾಡಿದೆ.
ಈ ನಡುವೆ ಉದ್ರಿಕ್ತ ಗುಂಪೊಂದು ಮಣಿಪುರದ ತೊಂಗ್ಜುನಲ್ಲಿರುವ ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿದೆ.
Two civilians were injured as mobs clashed with security forces overnight in Imphal town and attempts were made to torch the houses of BJP leaders, officials said on Saturday.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm