ಬ್ರೇಕಿಂಗ್ ನ್ಯೂಸ್
02-11-20 11:30 am Headline Karnataka News Network ದೇಶ - ವಿದೇಶ
ಶ್ರೀನಗರ, ನವೆಂಬರ್ 02: ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ಆಪರೇಶನಲ್ ಚೀಫ್ ಆಗಿದ್ದ ಡಾ.ಸೈಫುಲ್ಲಾ ಸೇನಾ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.
ಜಮ್ಮು ಕಾಶ್ಮೀರದ ಶ್ರೀನಗರದ ರಂಗ್ರೆತ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿದ್ದು, ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಕಮಾಂಡರ್ ಆಗಿದ್ದ ಸೈಫುಲ್ಲಾ ಹತನಾಗಿದ್ದಾನೆ. ಈ ವೇಳೆ ಆತನ ಜೊತೆಗಿದ್ದ ಉಗ್ರನನ್ನು ಭದ್ರತಾ ಪಡೆಗಳು ಜೀವಂತವಾಗಿ ವಶಕ್ಕೆ ಪಡೆದಿವೆ ಎಂದು ಐಜಿಪಿ ವಿಜಯ ಕುಮಾರ್ ಹೇಳಿದ್ದಾರೆ.
ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಸಿಆರ್ ಪಿಎಫ್ ಪಡೆಗಳು ರಂಗ್ರೆತ್ ಏರಿಯಾದಲ್ಲಿ ಮೂವರು ಉಗ್ರರು ಅಡಗಿಕೊಂಡಿರುವುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದು ಒಬ್ಬಾತ ಜೀವಂತ ಸೆರೆಸಿಕ್ಕಿದ್ದಾನೆ. ಈ ವೇಳೆ ಸೈಫುಲ್ಲಾ ಮಿರ್ ಎಂಬಾತ ಸಾವನ್ನಪ್ಪಿದ್ದಾನೆ.
ಸೈಫುಲ್ಲಾ ಮಿರ್ ಗಾಝಿ ಹೈದರ್ ಅಲಿಯಾಸ್ ಡಾಕ್ಟರ್ ಸಾಹಬ್ 2014ರಲ್ಲಿ ಹಿಜ್ಬುಲ್ ಉಗ್ರ ಸಂಘಟನೆ ಸೇರಿದ್ದ. ಪುಲ್ವಾಮಾ ಜಿಲ್ಲೆಯ ಮಲಾಂಗ್ ಪೋರಾ ನಿವಾಸಿಯಾಗಿರುವ ಸೈಫುಲ್ಲಾನನ್ನು ರಿಯಾಜ್ ನೈಕು ಎಂಬ ಉಗ್ರ ಹಿಜ್ಬುಲ್ ಸಂಘಟನೆ ಸೇರ್ಪಡೆ ಮಾಡಿದ್ದ. ಅಲ್ಲದೆ, ಸೈಫುಲ್ಲಾನಿಗೆ ಗಾಝಿ ಹೈದರ್ ಎಂದು ನಾಮಕರಣ ಮಾಡಿದ್ದ. ಹಿಜ್ಬುಲ್ ಸಂಘಟನೆಯ ಕಮಾಂಡರ್ ಆಗಿದ್ದ ರಿಯಾಜ್ ನೈಕು ಕಳೆದ ಮೇ ತಿಂಗಳಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದ. ಆಬಳಿಕ ಸೈಫುಲ್ಲಾ ಕಮಾಂಡರ್ ಆಗಿ ಸಂಘಟನೆಯನ್ನು ಮುನ್ನಡೆಸುತ್ತಿದ್ದ.
ಜಮ್ಮು ಕಾಶ್ಮೀರದ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿದ್ದ ಹತ್ತು ಉಗ್ರರಲ್ಲಿ ಸೈಫುಲ್ಲಾ ಒಬ್ಬ. ಭದ್ರತಾ ಪಡೆಗಳು ಇತ್ತೀಚೆಗಷ್ಟೇ ಮೋಸ್ಟ್ ವಾಂಟೆಡ್ ಉಗ್ರರ ಲಿಸ್ಟ್ ರೆಡಿ ಮಾಡಿತ್ತು. ಜಮ್ಮು ಕಾಶ್ಮೀರದಲ್ಲಿ ನಡೆದ ಹಲವು ಉಗ್ರರ ದಾಳಿ ಪ್ರಕರಣಗಳಲ್ಲಿ ಸೈಫುಲ್ಲಾ ಮಾಸ್ಟರ್ ಮೈಂಡ್ ಆಗಿದ್ದ. ಈತನನ್ನು ಕೊಂದಿದ್ದಕ್ಕೆ ಡಿಜಿಪಿ ದಿಲ್ ಬಾಘ್, ಭದ್ರತಾ ಪಡೆ ಮತ್ತು ಪೊಲೀಸರನ್ನು ಅಭಿನಂದಿಸಿದ್ದಾರೆ.
Hizbul Mujahideen militant commander Saifullah Mir was killed in an encounter with security forces on the outskirts of Srinagar district Sunday.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 04:39 pm
HK News Desk
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm